ಎನ್. ಚಂದ್ರಬಾಬು ನಾಯ್ಡು 
ದೇಶ

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವದ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ.

ಶ್ರೀಕಾಕುಳಂ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಜನಸಂಖ್ಯಾ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ ಶನಿವಾರ ಮಹತ್ವದ ಘೋಷಣೆ ಮಾಡಿದ್ದು, ಮೂರನೇ ಮಗು ಪಡೆಯುವ ದಂಪತಿಗೆ 30,000 ಮತ್ತು ನಾಲ್ಕನೇ ಮಗುವಿನ ಜನನಕ್ಕೆ 40,000 ಆರ್ಥಿಕ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದ್ದಾರೆ.

ಇಂದು ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಾಯ್ಡು, ರಾಜ್ಯ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಹೆಚ್ಚುವರಿ ವಿವರಗಳನ್ನು ಒಂದು ತಿಂಗಳೊಳಗೆ ಪ್ರಕಟಿಸಲಾಗುವುದು ಎಂದು ಹೇಳಿದರು.

"ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ. ಇದು ಸರಿಯಾದ ನಿರ್ಧಾರವಲ್ಲವೇ?" ಎಂದು ಸ್ವರ್ಣಆಂಧ್ರ–ಸ್ವಚ್ಛಆಂಧ್ರ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆದಾಗ್ಯೂ, ನಾಯ್ಡು ಈ ಹಿಂದೆ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಬೆಂಬಲಿಸಿದ್ದರು. ಪ್ರಸ್ತುತ ಜನಸಂಖ್ಯಾ ಪರಿಸ್ಥಿತಿಯು ಜನನ ಪ್ರಮಾಣವನ್ನು ಹೆಚ್ಚಿಸಲು ಸಮಾಜವು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಎರಡನೇ ಮಗು ಪಡೆಯುವ ದಂಪತಿಗೆ 25,000 ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ನಾಯ್ಡು ಅವರು ಕಳೆದ ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಅದರ ಮುಂದುವರೆದ ಭಾಗ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು