ರೈಲಿ ಬೋಗಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು. 
ದೇಶ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬೆಂಕಿಗಾಹುತಿಯಾದ ಬೋಗಿಯನ್ನು ರೈಲಿನಿಂದ ಪ್ರತ್ಯೇಕಿಸಿದ್ದಾರೆ.

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಭಾನುವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಪಶ್ಚಿಮ ಮಧ್ಯ ರೈಲ್ವೆಯ ಕೋಟಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಲುನಿ ರಿಚ್ಚಾ ಮತ್ತು ವಿಕ್ರಮಗಢ ಅಲೋಟ್ ನಿಲ್ದಾಣಗಳ ನಡುವೆ ಮುಂಜಾನೆ ಸುಮಾರು 5.30 ಕ್ಕೆ ರೈಲು ಸಂಖ್ಯೆ 12431 ರ ಬಿ-1 ಕೋಚ್‌ನಲ್ಲಿ ಈ ಅವಘಡ ಸಂಭವಿಸಿದೆ. ಈ ಬೋಗಿಯಲ್ಲಿ ಒಟ್ಟು 68 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬೆಂಕಿಗಾಹುತಿಯಾದ ಬೋಗಿಯನ್ನು ರೈಲಿನಿಂದ ಪ್ರತ್ಯೇಕಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಓವರ್‌ಹೆಡ್ ಎಲೆಕ್ಟ್ರಿಕ್ ಸರಬರಾಜು (OHE) ಸ್ಥಗಿತಗೊಳಿಸಿ, ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೂಲಕ ಮೂಲಕ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಮುಂದಿನ ಪ್ರಯಾಣಕ್ಕಾಗಿ ಅವರನ್ನು ಇತರ ಬೋಗಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಕೋಟಾ ನಿಲ್ದಾಣದಲ್ಲಿ ಹೆಚ್ಚುವರಿ ಬೋಗಿಯನ್ನು ಜೋಡಿಸಿ ರೈಲಿನ ಸಾಮರ್ಥ್ಯ ಮರುಸ್ಥಾಪಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಕೋಟಾ ರೈಲ್ವೆ ವಿಭಾಗದ ಪರಿಹಾರ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಈ ಅಪಘಾತದಿಂದಾಗಿ ದೆಹಲಿ-ಮುಂಬೈ ಮಾರ್ಗದ ರೈಲು ಸಂಚಾರದ ಮೇಲೆಯೂ ಪರಿಣಾಮ ಬೀರಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮತ್ತು ಸುರಕ್ಷತಾ ತಪಾಸಣೆ ನಡೆಸಿದ ಕಾರಣ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.

ರೈಲ್ವೆ ಅಧಿಕಾರಿಗಳ ಪ್ರಾಥಮಿಕ ತನಿಖೆಯ ಪ್ರಕಾರ, ಎಸಿ ಕೋಚ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!