ದೇಶ

ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ, ಗಂಡನಿಂದ ಭೀಕರ ಹಲ್ಲೆ: ತೀವ್ರ ರಕ್ತಸ್ತಾವ್ರದಿಂದ ಮೃತಪಟ್ಟ ಗರ್ಭಿಣಿ, ಬೆಚ್ಚಿಬಿದ್ದ ವೈದ್ಯರು!

ಛತ್ತೀಸ್‌ಗಢದಿಂದ ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂಬಿಕಾಪುರ ಬಳಿಯ ಹಳ್ಳಿಯಲ್ಲಿ 23 ವರ್ಷದ ಗರ್ಭಿಣಿ ಮಹಿಳೆಯನ್ನು ಆಕೆಯ ಪತಿ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ.

ಛತ್ತೀಸ್‌ಗಢದಿಂದ ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂಬಿಕಾಪುರ ಬಳಿಯ ಹಳ್ಳಿಯಲ್ಲಿ 23 ವರ್ಷದ ಗರ್ಭಿಣಿ ಮಹಿಳೆಯನ್ನು ಆಕೆಯ ಪತಿ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ.

ಮೃತ ಮಹಿಳೆಯನ್ನು ಛತ್ತೀಸ್‌ಗಢದ ಸಕರಿಯಾ ಗ್ರಾಮದ ನಿವಾಸಿ ಹೀರಾಬಾಯಿ ಎಂದು ಗುರುತಿಸಲಾಗಿದೆ. ಆಕೆಯ ಮೇಲೆ ಪತಿ ಪ್ರದೀಪ್ ಅಗಾರಿಯಾ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಮತ್ತು ಕುಟುಂಬ ಸದಸ್ಯರ ಪ್ರಕಾರ, ಆರೋಪಿಗಳು ಕೊಲೆ ಮಾಡುವ ಮೊದಲು ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಘಟನೆಯ ನಂತರ, ಆರೋಪಿಯು ಮಹಿಳೆಯ ದೇಹವನ್ನು ಮೋಟಾರ್ ಸೈಕಲ್‌ನ ಹಿಂಭಾಗಕ್ಕೆ ಕಟ್ಟಿ ಅಂಬಿಕಾಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದು, ಆಕೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ವೈದ್ಯರು ಆಕೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾಳೆಂದು ಘೋಷಿಸಿದರು. ನಂತರ ಆರೋಪಿ ಆಸ್ಪತ್ರೆ ಆವರಣದಿಂದ ಪರಾರಿಯಾಗಿದ್ದನು.

ಶವಪರೀಕ್ಷೆ ವೇಳೆ ಆಕೆ ಮೂರು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ. ವಿಧಿವಿಜ್ಞಾನ ತಂಡವು ಆಕೆಯ ಗುಪ್ತಾಂಗದಿಂದ ಸುಮಾರು 27 ಸೆಂಟಿಮೀಟರ್ ಉದ್ದದ ಕಬ್ಬಿಣದ ರಾಡ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಹಲವಾರು ಗಂಭೀರ ಗಾಯಗಳು ಕಂಡುಬಂದಿದ್ದು, ಅದರಲ್ಲಿ ಭಾರವಾದ ಮರದ ಕೋಲಿನಿಂದ ಪದೇ ಪದೇ ಹೊಡೆದ ಪರಿಣಾಮ ತಲೆಗೆ ಆಳವಾದ ಗಾಯಗಳಾಗಿದ್ದು, ಆಕೆಯ ತಲೆಬುರುಡೆ ಮುರಿದಿದೆ.

ಸಂತ್ರಸ್ತಳ ದೇಹದ ಮೇಲೆ ಕನಿಷ್ಠ 18 ಪ್ರಮುಖ ಗಾಯದ ಗುರುತುಗಳಿವೆ ಎಂದು ವೈದ್ಯಕೀಯ ತಜ್ಞರು ತಿಳಿಸಿದ್ದಾರೆ. ತೊಡೆಗಳು ಮತ್ತು ಹೊಟ್ಟೆಯ ಸುತ್ತಲಿನ ಗಾಯಗಳನ್ನು ನೋಡಿದರೇ ಬಲವಂತವಾಗಿ ರಾಡ್ ಅನ್ನು ಒಳಗೆ ತಳ್ಳಲಾಗಿದೆ ಎಂದು ವೈದ್ಯರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

ಬೇಲ್ ಫಸ್ಟ್ ಲುಕ್ ರಿಲೀಸ್ : ಸಾಲ್ಟ್ ಅಂಡ್‌ ಪೆಪ್ಪರ್ ಲುಕ್ ಶಿವಣ್ಣ, ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್ ! Video

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

SCROLL FOR NEXT