ಇಂದರ್ ಕೌರ್ 
ದೇಶ

ಮದುವೆಗೆ ನಿರಾಕರಣೆ: 6 ದಿನಗಳ ಬಳಿಕ ಪಂಜಾಬಿ ಗಾಯಕಿ ಶವ ಕಾಲುವೆಯಲ್ಲಿ ಪತ್ತೆ; ಆರೋಪಿ ಕೆನಡಾಕ್ಕೆ ಪರಾರಿ!

ಪಂಜಾಬ್‌ನ ಲುಧಿಯಾನದಲ್ಲಿ ಆರು ದಿನಗಳ ಹಿಂದೆ ಬಂದೂಕಿ ತೋರಿಸಿ ಅಪಹರಿಸಲ್ಪಟ್ಟಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ ಅಲಿಯಾಸ್ ಯಶಿಂದರ್ ಕೌರ್ ಶವ ನಿಲೋ ಕಾಲುವೆಯಲ್ಲಿ ಪತ್ತೆಯಾಗಿದೆ.

ಪಂಜಾಬ್‌ನ ಲುಧಿಯಾನದಲ್ಲಿ ಆರು ದಿನಗಳ ಹಿಂದೆ ಬಂದೂಕಿ ತೋರಿಸಿ ಅಪಹರಿಸಲ್ಪಟ್ಟಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ ಅಲಿಯಾಸ್ ಯಶಿಂದರ್ ಕೌರ್ ಶವ ನಿಲೋ ಕಾಲುವೆಯಲ್ಲಿ ಪತ್ತೆಯಾಗಿದೆ. ಶವವನ್ನು ಪ್ರಸ್ತುತ ಸಮ್ರಾಲಾ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪಂಜಾಬಿ ಗಾಯಕಿ ಇಂದರ್ಜಿತ್ ಕೌರ್ ಅವರ ಸಹೋದರ ಜೋತಿಂದರ್ ಸಿಂಗ್ ದೂರಿನ ಆಧಾರದ ಮೇರೆಗೆ ಮೇ 15ರಂದು ಮೋಗಾ ನಿವಾಸಿ ಸುಖ್ವಿಂದರ್ ಸಿಂಗ್ ಅಲಿಯಾಸ್ ಸುಖ ಮತ್ತು ಆತನ ಸಹಚರ ಕರಮ್ಜಿತ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರು ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೇ 13ರಂದು ರಾತ್ರಿ 8:30ರ ಸುಮಾರಿಗೆ ತನ್ನ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಖರೀದಿಸಲು ಇಂದರ್ ಕೌರ್ ಮಾರುಕಟ್ಟೆಗೆ ಹೋಗಿದ್ದರು. ಆದರೆ ತಡರಾತ್ರಿಯವರೆಗೂ ಮನೆಗೆ ಹಿಂತಿರುಗಲಿಲ್ಲ. ಹೀಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಆದರೆ ಆಕೆ ಪತ್ತೆಯಾಗಿರಲಿಲ್ಲ. ಪೊಲೀಸರ ತನಿಖೆಯಲ್ಲಿ ಇಂದರ್ ಕೌರ್ ಮೋಗಾ ಜಿಲ್ಲೆಯ ಭಾಲೂರ್ ಗ್ರಾಮದ ನಿವಾಸಿ ಸುಖವಿಂದರ್ ಸಿಂಗ್ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ಈಗ, ಶವ ಪತ್ತೆಯಾದ ನಂತರ, ಇಡೀ ಪ್ರಕರಣವು ಸಂಚಲನ ಮೂಡಿಸಿದೆ. ಪೊಲೀಸರು ಕೊಲೆ ಮತ್ತು ಅಪಹರಣದ ಕೋನದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ.

ಆರೋಪಿ ಸುಖವಿಂದರ್ ಸಿಂಗ್ ತನ್ನ ಸಹೋದರಿ ಇಂದರ್ ಕೌರ್ ಳನ್ನು ಮದುವೆಯಾಗಲು ಬಯಸಿದ್ದನು. ಆದರೆ ಮದುವೆಗೆ ಇಂದರ್ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಸುಖವಿಂದರ್ ಸಿಂಗ್ ಮತ್ತು ಆತನ ಸಹಚರರು ಇಂದರ್ ಕೌರ್ ಗೆ ಗನ್ ತೋರಿಸಿ ಅಪಹರಿಸಿ ನಂತರ ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಸುಖವಿಂದರ್ ಸಿಂಗ್ ಕೆನಡಾಕ್ಕೆ ಪರಾರಿಯಾಗಿದ್ದಾನೆ ಎಂದು ಕುಟುಂಬ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ಲಂಕಾ ವಿರುದ್ಧ ಏಕದಿನ, ಟೆಸ್ಟ್​ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆಎಲ್ ರಾಹುಲ್ ಉಪನಾಯಕ

NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ಆರೋಪಿಗಳ ಕೋಚಿಂಗ್ ಸೆಂಟರ್ ಕಟ್ಟಡಗಳನ್ನು ಕೆಡವಿ; ಮಹಾ ಸಚಿವ ಆಗ್ರಹ

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

SCROLL FOR NEXT