ರಾಹುಲ್ ಗಾಂಧಿ  
ದೇಶ

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Video

ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ದೇಶಕ್ಕೆ ದೊಡ್ಡ 'ಆರ್ಥಿಕ ಆಘಾತ' ಎದುರಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಇಂದು ರಾಯ್‌ಬರೇಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, "ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರುತ್ತಿವೆ" ಎಂದು ವ್ಯಾಪಾರಿಗಳಿಗೆ ಎಚ್ಚರಿಸಿದರು.

ಹಲವು ವರ್ಷಗಳಿಂದ ನಾವು ನೋಡಿರದ ದೊಡ್ಡ ಆರ್ಥಿಕ ಆಘಾತ ಎದುರಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

"ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ" ಎಂದು ರಾಹುಲ್ ಗಾಂಧಿ ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!