ರಾಹುಲ್ ಗಾಂಧಿ  
ದೇಶ

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ

ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ದೇಶಕ್ಕೆ ದೊಡ್ಡ 'ಆರ್ಥಿಕ ಆಘಾತ' ಎದುರಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಇಂದು ರಾಯ್‌ಬರೇಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, "ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರುತ್ತಿವೆ" ಎಂದು ವ್ಯಾಪಾರಿಗಳಿಗೆ ಎಚ್ಚರಿಸಿದರು.

ಹಲವು ವರ್ಷಗಳಿಂದ ನಾವು ನೋಡಿರದ ದೊಡ್ಡ ಆರ್ಥಿಕ ಆಘಾತ ಎದುರಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

"ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ" ಎಂದು ರಾಹುಲ್ ಗಾಂಧಿ ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

ಡೊನಾಲ್ಡ್ ಟ್ರಂಪ್, ನೆತನ್ಯಾಹು ಹತ್ಯೆಗೆ ಭಾರಿ ಸ್ಕೆಚ್: $58 ಮಿಲಿಯನ್ ಬಹುಮಾನ ನೀಡಲು ಇರಾನ್ ಪ್ಲಾನ್!

ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು!

SCROLL FOR NEXT