ಯುವ ದಂಪತಿ ಮೇಲೆ ಭೀಕರ ಹಲ್ಲೆ 
ದೇಶ

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಜನನಿಬಿಡ ಗಿರಿ ರಸ್ತೆ ಪ್ರದೇಶದಲ್ಲೇ ಈ ಆಘಾತಕಾರಿ ಘಟನೆ ನಡೆದಿದ್ದು, ಹತ್ತಿರದಲ್ಲಿ ನಿಂತಿದ್ದ ಹಲವಾರು ಜನ ಮಾನವೀಯತೆ ಮರೆತು ಮುಖ ಪ್ರೇಕ್ಷಕರಾಗಿ ನೋಡಿದ್ದಾರೆ ವಿನಃ ಯಾರೊಬ್ಬರೂ ಜೋಡಿಯ ರಕ್ಷಣೆಗೆ ಮುಂದಾಗಲಿಲ್ಲ.

ಭುವನೇಶ್ವರ: ಒಡಿಶಾದ ಬೆರ್ಹಾಂಪುರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಯುವ ದಂಪತಿಗಳ ಮೇಲೆ ಬಿದಿರಿನ ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯದಲ್ಲಿ ವೈರಲ್ ಆದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜನನಿಬಿಡ ಗಿರಿ ರಸ್ತೆ ಪ್ರದೇಶದಲ್ಲೇ ಈ ಆಘಾತಕಾರಿ ಘಟನೆ ನಡೆದಿದ್ದು, ಹತ್ತಿರದಲ್ಲಿ ನಿಂತಿದ್ದ ಹಲವಾರು ಜನ ಮಾನವೀಯತೆ ಮರೆತು ಮುಖ ಪ್ರೇಕ್ಷಕರಾಗಿ ನೋಡಿದ್ದಾರೆ ವಿನಃ ಯಾರೊಬ್ಬರೂ ಜೋಡಿಯ ರಕ್ಷಣೆಗೆ ಮುಂದಾಗಲಿಲ್ಲ.

ಸುತ್ತಲೂ ನೂರಾರು ಜನ ಸೇರಿದ್ದರೂ ದುಷ್ಕರ್ಮಿಗಳು ದಂಪತಿಯನ್ನು ಅಟ್ಟಾಡಿಸಿ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಆಶಿಶ್ ಸಾಹು ಮತ್ತು ಮುಖೇಶ್ ಸಾಹು ಸೇರಿ ಆರು ಜನರನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋದಲ್ಲಿ ರಸ್ತೆಯ ಮಧ್ಯದಲ್ಲಿ ಇಬ್ಬರು, ಬಿದಿರಿನ ಕೋಲುಗಳಿಂದ ದಂಪತಿಯನ್ನು ಹೊಡೆಯುತ್ತಿರುವುದನ್ನು ನೋಡಬಹುದು.

ಸಂತ್ರಸ್ತ ಮತ್ತು ದಾಳಿಕೋರರ ನಡುವೆ ಹಿಂದಿನಿಂದ ದ್ವೇಷವಿತ್ತು ಎನ್ನಲಾಗಿದೆ. "ದಾಳಿಕೋರರು ಮತ್ತು ಆ ವ್ಯಕ್ತಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಹಿಂದಿನ ದ್ವೇಷದಿಂದಾಗಿ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ದಂಪತಿಯನ್ನು ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡು ಗುಂಪಿನ ಮಧ್ಯೆ ಇದ್ದ ವೈಯಕ್ತಿಕ ದ್ವೇಷ ಹಾಗೂ ಹಳೆಯ ದ್ವೇಷವೇ ಈ ದಾಳಿಗೆ ಮುಖ್ಯ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಬಟ್ಟೆ ಎತ್ತಿ ನೋಡಿ ಪರಾರಿಯಾದ ದುರುಳ, ಪೊಲೀಸ್ ತನಿಖೆ ಆರಂಭ

'My magical May, one more win': 'ವಿಜಯ'ದ ಸಂಭ್ರಮ ಹಂಚಿಕೊಂಡ ತ್ರಿಶಾ

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ ಬೆನ್ನಲ್ಲೇ ಹಾಲಿನ ದರ 4 ರೂ. ಹೆಚ್ಚಳ; ಜೂನ್ 1 ರಿಂದ ಜಾರಿ

SCROLL FOR NEXT