ಧುರಂಧರ್ 2 ಚಿತ್ರದ ಪೋಸ್ಟರ್ 
ದೇಶ

'ಧುರಂಧರ್-2' ಸೇನಾ ರಹಸ್ಯ ಬಹಿರಂಗಪಡಿಸಿದೆಯೇ?: ಪರಿಶೀಲಿಸುವಂತೆ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಸೂಚನೆ

'ಧುರಂಧರ್' ಸಿನಿಮಾ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ದೇಶದ ಭದ್ರತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ನವದೆಹಲಿ: ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ಸೇನಾಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಬಗ್ಗೆ ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ)ನ ಹೆಡ್ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಚಲನಚಿತ್ರವು ಕಾಲ್ಪನಿಕ ಕಥೆಯಾಗಿರಬಹುದು. ಆದರೆ ಭದ್ರತಾ ಪಡೆ ಸಿಬ್ಬಂದಿ ಎತ್ತಿರುವ ಕಳವಳಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.

'ಧುರಂಧರ್' ಸಿನಿಮಾ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ದೇಶದ ಭದ್ರತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಧುರಂಧರ್: ದಿ ರಿವೆಂಜ್ ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ(ಸಿಬಿಎಫ್‌ಸಿ) ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ವಿಭಾಗೀಯ ಪೀಠವು, ಈ ವಿಷಯವನ್ನು ಪರಿಗಣಿಸಿ, ದೀಪಕ್ ಕುಮಾರ್ ಅವರ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ(ಎಂಐಬಿ) ಮತ್ತು ಸಿಬಿಎಫ್‌ಸಿಗೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ