ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಮತ್ತೋರ್ವ ಶಿಕ್ಷಕಿ ಬಂಧನ 
ದೇಶ

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

ಕೇಂದ್ರೀಯ ತನಿಖಾ ಸಂಸ್ಥೆ CBI ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ.

ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ (Central Bureau of Investigation) (CBI) ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಂಧಿತ ಉಪನ್ಯಾಸಕಿಯನ್ನು ಮನಿಶಾ ಸಂಜಯ್ ಹವಾಲ್ದಾರ್ (Manisha Sanjay Havaldar) ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಪುಣೆಯ ಸೇಠ್ ಹಿರಾಲಾಲ್ ಶರಾಫ್ ಪ್ರಶಾಲಾ (Seth Hiralal Saraf Prashala) ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆಕೆಯೇ “ಮೂಲ ವ್ಯಕ್ತಿ” ಎಂದು CBI ಆರೋಪಿಸಿದೆ.

“NEET-UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಆರೋಪಿಗಳಲ್ಲಿ ಮತ್ತೊಬ್ಬರನ್ನು CBI ಗುರುತಿಸಿದೆ” ಎಂದು CBI ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NTA ತಜ್ಞೆಯಾಗಿದ್ದ ವೇಳೆ ಪ್ರಶ್ನೆ ಪತ್ರಿಕೆ ಕಳವು

CBI ಮಾಡಿರುವ ಆರೋಪದಂತೆ ಮನೀಷಾ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(National Testing Agency) (NTA) ಪರೀಕ್ಷಾ ತಜ್ಞೆಯಾಗಿ ನೇಮಿಸಲಾಗಿತ್ತು. ಈ ಕಾರಣದಿಂದ ಅವರಿಗೆ ಭೌತಶಾಸ್ತ್ರ ಪ್ರಶ್ನೆಪತ್ರಿಕೆಗೆ ಸಂಪೂರ್ಣ ಪ್ರವೇಶವಿತ್ತು. ಅವರು ಏಪ್ರಿಲ್ ತಿಂಗಳಲ್ಲಿ ಕೆಲವು ಪ್ರಶ್ನೆಗಳನ್ನು ಸಹ ಆರೋಪಿಯಾಗಿರುವ ಮನಿಷಾ ಮಂಡಾರೆಗೆ ಹಂಚಿಕೊಂಡಿದ್ದರು ಎಂದು CBI ಹೇಳಿದೆ.

CBI ಈ ಹಿಂದೆ ಮೇ 16ರಂದು ಪುಣೆಯ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಮಂಧಾರೆ ಎಂಬುವವರನ್ನು ಇದೇ ಪ್ರಕರಣದಲ್ಲಿ ಬಂಧಿಸಿತ್ತು. ತನಿಖೆಯಲ್ಲಿ ಹವಾಲ್ದಾರ್ ಹಂಚಿಕೊಂಡಿದ್ದ ಪ್ರಶ್ನೆಗಳು NEET UG 2026ರ ಭೌತಶಾಸ್ತ್ರ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿರುವುದು ಪತ್ತೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇನ್ನು CBI ದೇಶದ ವಿವಿಧ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ಮಹತ್ವದ ದಾಖಲೆಗಳು, ಲ್ಯಾಪ್‌ಟಾಪ್‌ಗಳು, ಬ್ಯಾಂಕ್ ಸ್ಟೇಟ್ಮೆಂಟ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. “ವಶಪಡಿಸಿಕೊಂಡಿರುವ ವಸ್ತುಗಳ ಸವಿಸ್ತಾರ ವಿಶ್ಲೇಷಣೆ ಮುಂದುವರಿದಿದೆ,” ಎಂದು ತನಿಖಾ ಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Twisha Sharma ಸಾವು ಪ್ರಕರಣ: ನಾಪತ್ತೆಯಾಗಿದ್ದ ಪತಿ ಜಬಲ್ಪುರ ನ್ಯಾಯಾಲಯಕ್ಕೆ ಶರಣು; ಅತ್ತೆಗೆ ಹೈಕೋರ್ಟ್ ನೋಟಿಸ್; Video

ಕ್ಯಾಬಿನೆಟ್ ಸೆಕ್ರೆಟರಿಯೇಟ್‌ನಲ್ಲಿ ಮಣಿಪುರ ಡಿಜಿಪಿ ರಾಜೀವ್ ಸಿಂಗ್‌ಗೆ ಉನ್ನತ ಹುದ್ದೆಗೆ ಕೇಂದ್ರದಿಂದ ಬಡ್ತಿ!

NEET ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸಚಿವ ಪ್ರಧಾನ್ ರಾಜೀನಾಮೆಗೆ 'Cockroach Janta Party' ಆಗ್ರಹ

'ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ': NEET UG ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಕಠಿಣ ನಿರ್ಧಾರ ಎಂದ Dharmendra Pradhan

ಮೃತ ನಟಿ ತ್ವಿಶಾ ಶರ್ಮಾ ಎರಡನೇ ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಅನುಮತಿ; ಜಾಮೀನು ಅರ್ಜಿ ಹಿಂಪಡೆದ ಪತಿ!

SCROLL FOR NEXT