ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು (ಸ್ವತಂತ್ರ ಪ್ರಭಾರ) ಹಾಗೂ ಕೇಂದ್ರ ಇಲಾಖೆ ರಾಜ್ಯ ಸಚಿವರು ಭಾಗವಹಿಸಿದ್ದರು. ಇದು ಈ ವರ್ಷದ ಮೊದಲ ಸಚಿವ ಸಂಪುಟ ಸಭೆಯಾಗಿತ್ತು. 
ದೇಶ

ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?

‘Ease of Living’, ‘Ease of Doing Business’ ಹೆಚ್ಚಿಸುವುದು ಹಾಗೂ ‘ವಿಕಸಿತ ಭಾರತ’ ಎಂಬ ನಮ್ಮ ಸಾಮೂಹಿಕ ಕನಸನ್ನು ನನಸು ಮಾಡಲು ಅಗತ್ಯ ಸುಧಾರಣೆಗಳನ್ನು ಹೇಗೆ ಮುಂದುವರಿಸಬೇಕು ಎಂಬ ಬಗ್ಗೆ ಪರಸ್ಪರ ಅಭಿಪ್ರಾಯಗಳು

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶುಕ್ರವಾರ ಸಚಿವ ಸಂಪುಟ ಸಭೆಯೊಂದಿಗೆ ನಡೆದ “ಫಲಪ್ರದ” ಸಭೆಯಲ್ಲಿ ‘Ease of Living’ (ಸುಲಭವಾಗಿ ಬಾಳ್ವೆ ನಡೆಸುವುದು), ‘Ease of Doing Business’ (ವ್ಯವಹಾರ ಸುಗಮತೆ) ಹೆಚ್ಚಿಸುವುದು ಹಾಗೂ 2047ರೊಳಗೆ ಅಭಿವೃದ್ಧಿಶೀಲ ಭಾರತ ನಿರ್ಮಾಣದ ಗುರಿ ಸಾಧಿಸಲು ಸುಧಾರಣೆಗಳನ್ನು ವೇಗಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಸಚಿವ ಸಂಪುಟ ಸಭೆಯೊಂದಿಗೆ ಫಲಪ್ರದ ಸಭೆ ನಡೆಯಿತು. ‘Ease of Living’, ‘Ease of Doing Business’ ಹೆಚ್ಚಿಸುವುದು ಹಾಗೂ ‘ವಿಕಸಿತ ಭಾರತ’ ಎಂಬ ನಮ್ಮ ಸಾಮೂಹಿಕ ಕನಸನ್ನು ನನಸು ಮಾಡಲು ಅಗತ್ಯ ಸುಧಾರಣೆಗಳನ್ನು ಹೇಗೆ ಮುಂದುವರಿಸಬೇಕು ಎಂಬ ಬಗ್ಗೆ ಪರಸ್ಪರ ಅಭಿಪ್ರಾಯಗಳು ಮತ್ತು ಉತ್ತಮ ಅನುಭವಗಳನ್ನು ಹಂಚಿಕೊಂಡೆವು ಎಂದು ಮೋದಿ Xನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿನ್ನೆ ಗುರುವಾರ ಸಂಜೆ ನಾಲ್ಕು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ) ಹಾಗೂ ಕೇಂದ್ರ ಇಲಾಖೆ ರಾಜ್ಯ ಸಚಿವರು ಭಾಗವಹಿಸಿದ್ದರು. ಇದು ಈ ವರ್ಷದ ಮೊದಲ ಸಚಿವ ಸಂಪುಟ ಸಭೆಯಾಗಿತ್ತು.

ಮೂಲಗಳ ಪ್ರಕಾರ, 2047ರೊಳಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಗಮನದಲ್ಲಿಟ್ಟುಕೊಳ್ಳುವಂತೆ ಮೋದಿ ಸಚಿವರಿಗೆ ಸೂಚಿಸಿದರು. ಜೊತೆಗೆ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವ “Ease of Living” ಆಡಳಿತದ ಪ್ರಮುಖ ಉದ್ದೇಶವಾಗಿರಬೇಕು ಎಂದು ಅವರು ಒತ್ತಿಹೇಳಿದರು.

ಸರ್ಕಾರದ ಕಲ್ಯಾಣ ಯೋಜನೆಗಳು ಗರಿಷ್ಠ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸಚಿವರಿಗೆ ಸಲಹೆ ನೀಡಿದರು. ಜನರ ಜೀವನದಲ್ಲಿ ಅನಗತ್ಯ ಹಸ್ತಕ್ಷೇಪ ಇರಬಾರದು ಎಂದೂ ಅವರು ಹೇಳಿದರು.

2014ರಿಂದ ಸರ್ಕಾರ ಅಧಿಕಾರದಲ್ಲಿದ್ದರೂ, ಹಿಂದಿನ ಸಾಧನೆಗಳಿಗಿಂತ ಭವಿಷ್ಯದ ಗುರಿಗಳತ್ತ ಗಮನಹರಿಸುವಂತೆ ಪ್ರಧಾನಿ ಸಚಿವರಿಗೆ ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ.

ಸರ್ಕಾರಿ ಕಾರ್ಯಗಳಲ್ಲಿ ವಿಳಂಬ ಅಥವಾ ಬಾಕಿ ಉಳಿಯುವಿಕೆ ಇರಬಾರದು ಎಂದು ಹೇಳಿ, ಸಮಯೋಚಿತ ಆಡಳಿತದ ಅಗತ್ಯವನ್ನೂ ಮೋದಿ ಒತ್ತಿಹೇಳಿದರು.

ಸಭೆಯ ವೇಳೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಧಾನಿ ಮೋದಿಯವರ ಇತ್ತೀಚಿನ ಯುಎಇ, ನೆದರ್‌ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ಭೇಟಿಗಳ ಕುರಿತು ಸಚಿವ ಸಂಪುಟಕ್ಕೆ ಮಾಹಿತಿ ನೀಡಿದರು. ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯಕ್ಷಮತೆ ಹಾಗೂ ಉಪಕ್ರಮಗಳ ಕುರಿತು ಒಂಬತ್ತು ಕಾರ್ಯದರ್ಶಿಗಳು ಪ್ರಸ್ತುತಿಗಳನ್ನು ನೀಡಿದರು.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಹಾಗೂ ಪುದುಚೆರಿಯಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿರುವುದು ಗಮನಾರ್ಹವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಭಾರತಕ್ಕೆ ಎಷ್ಟು ಬೇಕೋ ಅಷ್ಟು ತೈಲ ಮಾರಾಟಕ್ಕೆ ನಾವು ಸಿದ್ಧ": ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ

ನೀವು ಅಸಹ್ಯಕರ, ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ: Body-shaming ಮಾಡಿದ ಪಾಪರಾಜಿಗಳಿಗೆ ಸಾರಾ ತೆಂಡೂಲ್ಕರ್ ಕ್ಲಾಸ್..!

ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್‌ನಿರ್ಮಾಣ, ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ: ವರದಿ

'ಗೃಹಲಕ್ಷ್ಮಿ ಹಣ ಕೊಡಿಸಿ'; ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು, ಸರ್ಕಾರಕ್ಕೆ ನೋಟಿಸ್ ಜಾರಿ

SCROLL FOR NEXT