ಸಂಯುಕ್ತ ಕಿಸಾನ್ ಮೋರ್ಚಾ 
ದೇಶ

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದ ರೈತ ಸಂಘಟನೆಗಳು; ಮೇ.27ರಂದು ಮುಷ್ಕರಕ್ಕೆ ಕರೆ

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ CACP, ಖಾರೀಫ್ ಮತ್ತು ರಬಿ ಹಂಗಾಮಿನ ಅಧಿಸೂಚಿತ ಬೆಳೆಗಳಿಗೆ MSP ಶಿಫಾರಸು ಮಾಡುವ ತಜ್ಞ ಸಲಹಾ ಸಂಸ್ಥೆಯಾಗಿದೆ.

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತಪರ ಸಂಘಟನೆಗಳು ರಾಷ್ಟ್ರವ್ಯಾಪಿ ಹೋರಾಟ ಆರಂಭಿಸುವುದಾಗಿ ಘೋಷಿಸಿದ್ದು ಇದೇ ಮೇ 27 ಶುಕ್ರವಾರದಂದು ಮುಷ್ಕರಕ್ಕೆ ಕರೆ ನೀಡಿವೆ.

ಸಂಯುಕ್ತ ಕಿಸಾನ್ ಮೋರ್ಚಾ ಮೇ 27ರಿಂದ ರಾಷ್ಟ್ರವ್ಯಾಪಿ ಹೋರಾಟ ಆರಂಭಿಸುವುದಾಗಿ ಘೋಷಿಸಿದ್ದು, ಕೇಂದ್ರ ಸರ್ಕಾರದ ಇತ್ತೀಚಿನ ಕನಿಷ್ಠ ಬೆಂಬಲ ಬೆಲೆ (MSP) ಆದೇಶ ಮತ್ತು 2026-27ರ ಖಾರೀಫ್ ಹಂಗಾಮಿನ ಬೆಲೆ ನೀತಿಗೆ ಸಂಬಂಧಿಸಿದ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗ (Commission for Agricultural Costs and Prices) (CACP)ದ ವರದಿ ಪ್ರತಿಗಳನ್ನು ಸುಟ್ಟು ಹಾಕಲು ರೈತ ಸಂಘಟನೆಗಳು ಮತ್ತು ಕೃಷಿ ಕಾರ್ಮಿಕರಿಗೆ ಕರೆ ನೀಡಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ CACP, ಖಾರೀಫ್ ಮತ್ತು ರಬಿ ಹಂಗಾಮಿನ ಅಧಿಸೂಚಿತ ಬೆಳೆಗಳಿಗೆ MSP ಶಿಫಾರಸು ಮಾಡುವ ತಜ್ಞ ಸಲಹಾ ಸಂಸ್ಥೆಯಾಗಿದೆ.

“ಮೋಸದ MSP ವ್ಯವಸ್ಥೆ” ರೈತ ಸಂಘಟನೆಗಳ ಆರೋಪ

ವರ್ಚುವಲ್ ಪತ್ರಿಕಾಗೋಷ್ಠಿಯ ನಂತರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ SKM, ಕೇಂದ್ರ ಸರ್ಕಾರ “ಮೋಸದ MSP ವ್ಯವಸ್ಥೆ” ಹೇರಿದೆ ಎಂದು ಆರೋಪಿಸಿದೆ. ಇಂಧನ ದರ ಏರಿಕೆ ಮೂಲಕ ರೈತರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿದೆ ಹಾಗೂ ರಸಗೊಬ್ಬರ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸಲು ಸರ್ಕಾರ ವಿಫಲವಾಗಿದೆ ಎಂದು ಸಂಘಟನೆ ಟೀಕಿಸಿದೆ. ರಸಗೊಬ್ಬರ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗಳನ್ನು ನಡೆಸುವುದಾಗಿ ಕಿಸಾನ ಮೋರ್ಚಾ ಘೋಷಿಸಿದ್ದು, ಕಾಳಸಂತೆ ನಿಯಂತ್ರಣದಲ್ಲೂ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

MSP ವಿರುದ್ಧ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

2021-22ರಲ್ಲಿ ದೆಹಲಿ ಗಡಿಭಾಗಗಳಲ್ಲಿ ನಡೆದ ಐತಿಹಾಸಿಕ ರೈತ ಹೋರಾಟಕ್ಕೆ ನೇತೃತ್ವ ನೀಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ, 2026-27ರ ಖಾರೀಫ್ ಹಂಗಾಮಿಗೆ ಘೋಷಿಸಲಾದ MSP ರಚನೆ ವಿರುದ್ಧ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದೆ.

ಇತ್ತೀಚಿನ ಇಂಧನ ದರ ಏರಿಕೆ ಮತ್ತು ಗಂಭೀರವಾಗುತ್ತಿರುವ ರಸಗೊಬ್ಬರ ಸಮಸ್ಯೆಯನ್ನೂ ಪ್ರತಿಭಟನೆಯ ಪ್ರಮುಖ ವಿಷಯಗಳಾಗಿ ಸಂಘಟನೆ ಉಲ್ಲೇಖಿಸಿದೆ.

ರೈತ ಸಂಘಟನೆಗಳ ಪ್ರಕಾರ, ಉತ್ಪಾದನಾ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿದ್ದರೂ MSP ಏರಿಕೆ ರೈತರ ನಿರೀಕ್ಷೆಗೆ ತಕ್ಕಂತೆ ಇಲ್ಲ. ಡೀಸೆಲ್, ರಸಗೊಬ್ಬರ ಮತ್ತು ಕೃಷಿ ಉಪಕರಣಗಳ ಬೆಲೆ ಏರಿಕೆ ರೈತರ ಆದಾಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಘೋಷಿಸಿರುವ MSP ವ್ಯವಸ್ಥೆ ರೈತರಿಗೆ ನಿಜವಾದ ಲಾಭ ನೀಡುತ್ತಿಲ್ಲ ಎಂದು SKM ವಾದಿಸಿದೆ.

ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿದ್ಧತೆ

ಮೇ 27ರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆಗಳು, ಧರಣಿಗಳು ಮತ್ತು MSP ಆದೇಶ ಪ್ರತಿಗಳ ದಹನ ಕಾರ್ಯಕ್ರಮಗಳನ್ನು ಆಯೋಜಿಸಲು SKM ಸಂಬಂಧಿತ ರೈತ ಸಂಘಟನೆಗಳಿಗೆ ಸೂಚನೆ ನೀಡಿದೆ. ಈ ಹೋರಾಟವು ಮುಂದಿನ ದಿನಗಳಲ್ಲಿ ಮತ್ತಷ್ಟು ವ್ಯಾಪಕವಾಗುವ ಸಾಧ್ಯತೆ ಇದೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Twisha Sharma ಸಾವು ಪ್ರಕರಣ: ನಾಪತ್ತೆಯಾಗಿದ್ದ ಪತಿ ಜಬಲ್ಪುರ ನ್ಯಾಯಾಲಯಕ್ಕೆ ಶರಣು; ಅತ್ತೆಗೆ ಹೈಕೋರ್ಟ್ ನೋಟಿಸ್; Video

ಹಾರ್ಮುಜ್ ಬಿಕ್ಕಟ್ಟು: ತೈಲ ಮಾರುಕಟ್ಟೆ 'ರೆಡ್ ಝೋನ್' ತಲುಪುವ ಅಪಾಯ; IEA ಎಚ್ಚರಿಕೆ

ಮಣಿಪುರ ಡಿಜಿಪಿ ರಾಜೀವ್ ಸಿಂಗ್‌ಗೆ ಕ್ಯಾಬಿನೆಟ್ ಸೆಕ್ರೆಟರಿಯೇಟ್‌ನಲ್ಲಿ ಉನ್ನತ ಹುದ್ದೆಗೆ ಕೇಂದ್ರದಿಂದ ಬಡ್ತಿ!

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

NEET ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸಚಿವ ಪ್ರಧಾನ್ ರಾಜೀನಾಮೆಗೆ 'Cockroach Janta Party' ಆಗ್ರಹ

SCROLL FOR NEXT