ಉಮರ್ ಖಾಲಿದ್ TNIE
ದೇಶ

2020 ರ ದೆಹಲಿ ಗಲಭೆ: ಉಮರ್ ಖಾಲಿದ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು! ಷರತ್ತುಗಳೇನು?

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ನವದೆಹಲಿ: 2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್‌ಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಕಳೆದ ತಿಂಗಳು ನಿಧನರಾದ ತನ್ನ ಚಿಕ್ಕಪ್ಪನ 'ಚೆಹಲ್ಲಮ್' ಆಚರಣೆಗೆ ಹಾಜರಾಗಲು ಖಾಲಿದ್ 15 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು.

ಹಲವು ಷರತ್ತುಗಳೊಂದಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಖಾಲಿದ್ ದೆಹಲಿ-ಎನ್‌ಸಿಆರ್ ಪ್ರದೇಶದೊಳಗೆ ಇರಬೇಕು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿರುವ ವಿಳಾಸದಲ್ಲಿ ಮಾತ್ರ ಇರಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಆಸ್ಪತ್ರೆ ಹೊರತುಪಡಿಸಿ ಬೇರೆಲ್ಲಿಯೂ ಪ್ರಯಾಣಿಸಲು ಅವರಿಗೆ ಅವಕಾಶವಿರುವುದಿಲ್ಲ ಮತ್ತು ಮಧ್ಯಂತರ ಜಾಮೀನು ಅವಧಿಯಲ್ಲಿ ಕೇವಲ ಒಂದು ಮೊಬೈಲ್ ಫೋನ್ ಸಂಖ್ಯೆಯನ್ನು ಮಾತ್ರ ಬಳಸಬೇಕು. ಜಾಮೀನು ಸೀಮಿತ ಸ್ವರೂಪದ್ದಾಗಿದ್ದು, ನ್ಯಾಯಾಲಯ ವಿಧಿಸಿರುವ ಷರತ್ತುಗಳ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತೃತ್ವಕ್ಕೆ ಗೌರವ ನೀಡಿ, ದ್ವೇಷ ರಾಜಕಾರಣ ಬೇಡ: WFIಗೆ ದೆಹಲಿ ಹೈಕೋರ್ಟ್ ತೀವ್ರ ತರಾಟೆ, ವಿನೇಶ್ ಫೋಗಟ್‌ 'ಅನರ್ಹತೆ' ನಿರ್ಧಾರಕ್ಕೆ ತಡೆ..!

ಕರ್ನಾಟಕ, ಕೇರಳ ನಂತರ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಿಜೆಪಿ ಸರ್ಕಾರ ಘೋಷಣೆ

'Cockroach Eating Mangoes: 'ಕಾಕ್ರೋಜ್ ಜನತಾ ಪಾರ್ಟಿ ಬೆಂಬಲಿಸಿ ನಟ ಪ್ರಕಾಶ್ ರಾಜ್ ಪೋಸ್ಟ್, ವೈರಲ್!

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು

ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?

SCROLL FOR NEXT