ಸಾಂದರ್ಭಿಕ ಚಿತ್ರ 
ದೇಶ

ಕರ್ನಾಟಕ, ಕೇರಳ ನಂತರ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಿಜೆಪಿ ಸರ್ಕಾರ ಘೋಷಣೆ

ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.

ಕೋಲ್ಕತ್ತಾ: ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪಶ್ಚಿಮ ಬಂಗಾಳದಲ್ಲಿ ಜೂನ್ 1 ರಿಂದಲೇ ಜಾರಿಗೆ ಬರಲಿದೆ ಎಂದು ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ ಶುಕ್ರವಾರ ಪ್ರಟಿಸಿದೆ.

ಮೇ 21 ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.

ಸಾರಿಗೆ ಇಲಾಖೆಯ ಅಧಿಸೂಚನೆಯು, ಸಂಬಂಧಪಟ್ಟ ಬಿಡಿಒ ಅಥವಾ ಎಸ್‌ಡಿಒ ಕಚೇರಿಗಳ ಮೂಲಕ ಅರ್ಜಿ ಸಲ್ಲಿಸಿದ ನಂತರ ಎಲ್ಲಾ ಅರ್ಹ ಮಹಿಳೆಯರಿಗೆ ಕ್ಯೂಆರ್ ಕೋಡ್, ಛಾಯಾಚಿತ್ರ ಮತ್ತು ಫಲಾನುಭವಿ ವಿವರಗಳೊಂದಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಿದೆ.

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ(ಇಪಿಐಸಿ), ವಿಬಿ-ಜಿ RAMG ಜಾಬ್ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಛಾಯಾಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ ಸರ್ಕಾರ/ಪಿಎಸ್‌ಯು ಗುರುತಿನ ಚೀಟಿ, ಶಾಲೆಗಳು/ಕಾಲೇಜುಗಳು/ವಿಶ್ವವಿದ್ಯಾಲಯಗಳು ನೀಡುವ ಗುರುತಿನ ಚೀಟಿಗಳಂತಹ ಪೂರಕ ದಾಖಲೆಗಳ ಆಧಾರದ ಮೇಲೆ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ಹೇಳಿದೆ.

ಸ್ಮಾರ್ಟ್ ಕಾರ್ಡ್‌ಗಳನ್ನು ನೀಡುವವರೆಗೆ, ಮಹಿಳಾ ಪ್ರಯಾಣಿಕರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಮತ್ತು ಸರ್ಕಾರ ನೀಡಿದ ಸೇವಾ ಗುರುತಿನ ಚೀಟಿಗಳಂತಹ ಮಾನ್ಯ ಫೋಟೋ ಗುರುತಿನ ದಾಖಲೆಗಳನ್ನು ಹಾಜರುಪಡಿಸುವ ಮೂಲಕ ಉಚಿತ ಸೌಲಭ್ಯವನ್ನು ಪಡೆಯಲು ಅನುಮತಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗುರುತಿನ ದಾಖಲೆಗಳ ಪರಿಶೀಲನೆಯ ನಂತರ ಕಂಡಕ್ಟರ್‌ಗಳು ಮಹಿಳಾ ಪ್ರಯಾಣಿಕರಿಗೆ 'ಶೂನ್ಯ ಮೌಲ್ಯದ ಟಿಕೆಟ್‌ಗಳನ್ನು' ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ಯೋಜನೆ ಜೂನ್ 1, 2026 ರಿಂದ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!