ಭದ್ರತಾ ಪಡೆಗಳು 
ದೇಶ

ಜಮ್ಮು-ಕಾಶ್ಮೀರ: ರಜೋರಿಯಲ್ಲಿ ಎನ್ ಕೌಂಟರ್; ಮೂವರು ಭಯೋತ್ಪಾದಕರಿಗಾಗಿ ಭಾರಿ ಶೋಧ ಕಾರ್ಯಾಚರಣೆ!

ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಸೇನೆ ಹಳಿದೆ.

ರಜೋರಿ: ಜಮ್ಮು ಮತ್ತು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಎರಡರಿಂದ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಈ ಕುರಿತು ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.

"ಇಂದು ಬೆಳಿಗ್ಗೆ 11.30 ರ ಸುಮಾರಿಗೆ ಪೊಲೀಸರು ಮತ್ತು ಸಿಆರ್‌ಪಿಎಫ್ ಜೊತೆಗೆ ನಡೆಸಿದ ಗುಪ್ತಚರ ಆಧಾರಿತ ಜಂಟಿ ಕಾರ್ಯಾಚರಣೆ ವೇಳೆ ರಜೋರಿಯ ಗಂಭೀರ್ ಮುಘ್ಲಾನ್ ನಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಲಾಯಿತು. ಬಳಿಕ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿವೆ.

ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿದೆ. ಡೋರಿಮಲ್-ಗಂಭೀರ್ ಮೊಘಲಾ ಬೆಲ್ಟ್‌ನಲ್ಲಿ ಶಂಕಿತ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿ ತಂಡ ಪ್ರದೇಶವನ್ನು ಸುತ್ತುವರೆದು ವ್ಯಾಪಕ ಶೋಧ ನಡೆಸಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಕೊನೆಯ ಬಾರಿಗೆ ವರದಿಗಳು ಬಂದಾಗ ಕಾರ್ಯಾಚರಣೆ ಮುಂದುವರೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋನೇಷ್ಯಾ ಸಂಸತ್ತಿನಲ್ಲಿ ಒಡಿಶಾದ ಮಾಜಿ ಸಿಎಂ ಬಿಜು ಪಟ್ನಾಯಕ್ ಪರಾಕ್ರಮ ಬಣ್ಣಿಸಿದ ಪ್ರಧಾನಿ ಮೋದಿ!

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ!

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು - Video

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!