ಯೋಗಿ ಆದಿತ್ಯನಾಥ್, ಮೌಲಾನಾ ಅರ್ಷದ್ ಮದನಿ 
ದೇಶ

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ: ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!

ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಒತ್ತಾಯಿಸಿದ್ದು ಇದಕ್ಕೆ ಹಲವಾರು ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ.

ನವದೆಹಲಿ: ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಒತ್ತಾಯಿಸಿದ್ದು ಇದಕ್ಕೆ ಹಲವಾರು ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ. ಈ ವಿಷಯದ ಬಗ್ಗೆ ಸಮಾಜವನ್ನು ಒಗ್ಗೂಡಿಸುವ ಉಪಕ್ರಮಗಳಿಗಾಗಿ ಹಲವಾರು ಸಂಘಟನೆಗಳು ಇದನ್ನು ಬೆಂಬಲಿಸಿವೆ. ಇನ್ನು ಕೆಲವು ಸಂಘಟನೆಗಳು ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಲು ಉದ್ದೇಶಿಸಿವೆ.

ದೇಶದ ಅತ್ಯಂತ ಜನನಿಬಿಡ ರಾಜ್ಯ ಉತ್ತರಪ್ರದೇಶ ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಪ್ರದೇಶದಿಂದ ಈ ಒತ್ತಾಯ ಕೇಳಿಬಂದಿದ್ದು ಮಹತ್ವದ್ದಾಗಿದೆ. 2027ರಲ್ಲಿ ನಡೆಯುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಈ ಕೊನೆಯ ಬಕ್ರೀದ್ ದಿನದಂದು ಮುಸ್ಲಿಂ ಸಮುದಾಯದಿಂದ ಬಂದ ಈ ಕೂಗು ಮಹತ್ವದ್ದಾಗಿದೆ. ಏಕೆಂದರೆ ಇದು ಗೋಹತ್ಯೆ ವಿಷಯದ ರಾಜಕೀಯ ಶೋಷಣೆ ಮತ್ತು ಅದರ ಹೆಸರಿನಲ್ಲಿ ನಡೆಯುವ ಗುಂಪು ಹತ್ಯೆಯ ಘಟನೆಗಳನ್ನು ಕೊನೆಗೊಳಿಸುತ್ತದೆ ಎಂದು ಮುಸ್ಲಿಂ ಸಂಘಟನೆಗಳು ಆಶಿಸುತ್ತವೆ.

ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಬೇಕೆಂಬ ಮೌಲಾನಾ ಅರ್ಷದ್ ಮದನಿಯವರ ಬೇಡಿಕೆಯನ್ನು ಅಖಿಲ ಭಾರತ ಮುಸ್ಲಿಂ ಜಮಾಅತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಪೂರ್ಣ ಹೃದಯದಿಂದ ಬೆಂಬಲಿಸಿದರು. ಈ ವಿಷಯದ ಬಗ್ಗೆ ವಿವಿಧ ಮುಸ್ಲಿಂ ಸಂಘಟನೆಗಳನ್ನು ಒಮ್ಮತಕ್ಕೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದರು. ಈ ನಿಟ್ಟಿನಲ್ಲಿ, ಪ್ರಮುಖ ಮುಸ್ಲಿಂ ಸಂಘಟನೆಗಳ ಪ್ರಮುಖ ವ್ಯಕ್ತಿಗಳ ಸಭೆಯನ್ನು ಶೀಘ್ರದಲ್ಲೇ ದೆಹಲಿಯಲ್ಲಿ ನಡೆಸಲಾಗುವುದು. ಅಲ್ಲಿ ಬೇಡಿಕೆಗಳ ಜಂಟಿ ಜ್ಞಾಪಕ ಪತ್ರವನ್ನು ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಉನ್ನತ ನಾಯಕತ್ವಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು. ದೇಶಾದ್ಯಂತ ಗೋಹತ್ಯೆಗೆ ಸಂಬಂಧಿಸಿದ ಸರ್ಕಾರಿ ನೀತಿಗಳಿಗೆ ಏಕರೂಪತೆಯನ್ನು ತರುವುದಲ್ಲದೆ, ಗುಂಪು ಹತ್ಯೆ ಮತ್ತು ಅದರ ಹೆಸರಿನಲ್ಲಿ ನಡೆಯುವ ಇತರ ದೌರ್ಜನ್ಯಗಳನ್ನು ಕೊನೆಗೊಳಿಸುವುದರಿಂದ ಸರ್ಕಾರವು ಈ ಬೇಡಿಕೆಯನ್ನು ತಕ್ಷಣವೇ ಪೂರೈಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

IPL 2026: ಮುಂಬೈ ಇಂಡಿಯನ್ಸ್ ಮಣಿಸಿ ಪ್ಲೇಆಫ್‌ಗೆ ಎಂಟ್ರಿಕೊಟ್ಟ ರಾಜಸ್ಥಾನ ರಾಯಲ್ಸ್; ಪಂಜಾಬ್, KKR ಕನಸು ಭಗ್ನ!

IPL 2026: ಶಾರ್ದೂಲ್ ಠಾಕೂರ್‌ ವಿರುದ್ಧ 'ಸ್ವೀಟ್ ರಿವೆಂಜ್' ತೀರಿಸಿಕೊಂಡ ರವೀಂದ್ರ ಜಡೇಜಾ! Video ವೈರಲ್

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಭಟ್ಕಳ ದುರಂತ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೇರಿಕೆ, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

SCROLL FOR NEXT