ಎಬೋಲಾ ವೈರಸ್ 
ದೇಶ

Ebola Outbreak: ತಮಿಳುನಾಡು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಟರ, ಆಸ್ಪತ್ರೆಗಳಲ್ಲಿ ಸಿದ್ಧತೆ!

ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳನ್ನು ಎದುರಿಸಲು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಮತ್ತು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಲಾಗಿದೆ.

ಚೆನ್ನೈ: ಕೆಲವು ಆಫ್ರಿಕನ್ ದೇಶಗಳಲ್ಲಿ ಎಬೋಲಾ ವೈರಸ್ ಕಾಯಿಲೆಯ (EVD) ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಸಲಹೆಯನ್ನು ಅನುಸರಿಸಿ ತಮಿಳುನಾಡು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಪತ್ತೆಯಾಗದಿದ್ದರೂ ಆರೋಗ್ಯ ಅಧಿಕಾರಿಗಳು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನಾದ್ಯಂತ ಮುನ್ನೆಚ್ಚರಿಕೆ ವಹಿಸುವಂತೆ ಎಬೋಲಾ ಸೋಂಕು ವರದಿಯಾಗಿರುವ ಪ್ರದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆ ಸಾರ್ವಜನಿಕ ಆರೋಗ್ಯ ಮತ್ತು ನಿಯಂತ್ರಣ ಔಷಧ ನಿರ್ದೇಶನಾಲಯ (DPH))ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದೆ.

ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳನ್ನು ಎದುರಿಸಲು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಮತ್ತು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಶಂಕಿತ ಸೋಂಕುಗಳನ್ನು ಮೊದಲೇ ಗುರುತಿಸಿ ತಕ್ಷಣ ವರದಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು, ದಾದಿಯರು ಮತ್ತು ಕ್ಷೇತ್ರ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಜ್ವರ, ತೀವ್ರ ದೌರ್ಬಲ್ಯ, ಸ್ನಾಯು ನೋವು, ತಲೆನೋವು, ಗಂಟಲು ನೋವು, ವಾಂತಿ, ಅತಿಸಾರ, ಚರ್ಮದ ಮೇಲೆ ಗುಳ್ಳೆಗಳು, ಆಂತರಿಕ ಅಥವಾ ಬಾಹ್ಯ ರಕ್ತಸ್ರಾವ ಎಬೋಲಾಗೆ ಸಂಬಂಧಿಸಿದ ಲಕ್ಷಣಗಳಾಗಿವೆ . ಅಂತಹ ಲಕ್ಷಣಗಳು ಕಾಣಿಸಿಕೊಂಡರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಮತ್ತು ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ತಮಿಳುನಾಡಿನಲ್ಲಿ ಯಾವುದೇ ಎಬೋಲಾ ಪ್ರಕರಣ ವರದಿಯಾಗದಿದ್ದರೂ ವಿದೇಶಕ್ಕೆ ತೆರಳುವವರು ಹಾಗೂ ಆಗಮಿಸುವವರ ಸಂಖ್ಯೆಯ ಹೆಚ್ಚಿರುವುದರಿಂದ ಹೆಚ್ಚಿನ ಸಿದ್ಧತೆ ಅಗತ್ಯವಾಗಿದೆ. ವಿಮಾನ ನಿಲ್ದಾಣಗಳು, ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳ ನಡುವಿನ ಸಮನ್ವಯವನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಟ್ಕಳ ದುರಂತ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೇರಿಕೆ, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಬೆಂಗಳೂರು: ಲೀಗ್ ಪಂದ್ಯದ ವೇಳೆ ಹೃದಯಾಘಾತದಿಂದ 39ನೇ ವಯಸ್ಸಿಗೆ ಕರ್ನಾಟಕದ ಕ್ರಿಕೆಟಿಗ ನಿಧನ!

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

KL Rahul ಆಯ್ತು ಇದೀಗ ರಿಷಬ್ ಪಂತ್ ನಾಯಕತ್ವಕ್ಕೆ ಕುತ್ತು?: LSG ಡೈರೆಕ್ಟರ್ ಟಾಮ್ ಮೂಡಿ ಸುಳಿವು!

SCROLL FOR NEXT