ಖ್ವಾಜಾ ಮೊಯಿಜುದ್ದೀನ್ 
ದೇಶ

ವಕ್ಫ್ ಬೋರ್ಡ್ ಪರ ವಾದಿಸುತ್ತಿದ್ದ ಹಿರಿಯ ವಕೀಲ ಖ್ವಾಜಾಗೆ ಸ್ಕಾರ್ಪಿಯೋ ಡಿಕ್ಕಿ; ಸ್ಥಳದಲ್ಲೇ ಸಾವು, Video!

ಮೇ 23ರಂದು ಹೈದರಾಬಾದ್‌ನಲ್ಲಿ ಹಿರಿಯ ವಕೀಲ ಖ್ವಾಜಾ ಮೊಯಿಜುದ್ದೀನ್ ಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇದು ಪೂರ್ವಯೋಜಿತ ಕೊಲೆಯ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹೈದರಾಬಾದ್: ಮೇ 23ರಂದು ಹೈದರಾಬಾದ್‌ನಲ್ಲಿ ಹಿರಿಯ ವಕೀಲ ಖ್ವಾಜಾ ಮೊಯಿಜುದ್ದೀನ್ ಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇದು ಪೂರ್ವಯೋಜಿತ ಕೊಲೆಯ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಖ್ವಾಜಾ ಮೊಯಿಜುದ್ದೀನ್ ಮನೆಯಿಂದ ಹೊರಬಂದು ತಮ್ಮ ಕಾರನ್ನು ಹತ್ತಲು ಹೊರಟಿದ್ದಾಗ, ಹಸಿರು ಬಣ್ಣದ ಸ್ಕಾರ್ಪಿಯೋ ಕಾರು ಅವರಿಗೆ ಡಿಕ್ಕಿ ಹೊಡೆದಿತ್ತು.

ಹೈದರಾಬಾದ್‌ನಲ್ಲಿ ನಡೆದ ಘಟನೆಯ ವೀಡಿಯೊ ಕೂಡ ಹೊರಬಿದ್ದಿದೆ. ವೀಡಿಯೊದಲ್ಲಿ 63 ವರ್ಷದ ವಕೀಲ ಮೊಯಿಜುದ್ದೀನ್ ತಮ್ಮ ಕಾರಿನಲ್ಲಿ ಚೀಲವನ್ನು ಇಡುವುದನ್ನು ಕಾಣಬಹುದು. ಈ ವೇಳೆ ವೇಗವಾಗಿ ಬಂದ ಕಾರು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಕಾರಿನಿಂದ ಸುಮಾರು 15-20 ಅಡಿಗಳಷ್ಟು ದೂರಕ್ಕೆ ಬಿದ್ದರು. ಕೂಡಲೇ ಸ್ಥಳೀಯರು ವಕೀಲ ಮೊಯಿಜುದ್ದೀನ್ ಅವರನ್ನು ಮಹಾವೀರ್ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹಿಟ್-ಅಂಡ್-ರನ್ ಪ್ರಕರಣವನ್ನು ದಾಖಲಿಸಲಾಗಿದೆ. ವಾಹನವನ್ನು ಪತ್ತೆಹಚ್ಚಲು ಮತ್ತು ಆರೋಪಿಗಳನ್ನು ಗುರುತಿಸಲು ನಾಲ್ಕು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಟುಂಬಸ್ಥರಿಂದ ಪಿತೂರಿ ಶಂಕೆ

ವಕ್ಫ್ ಭೂಮಿಯ ಅತಿಕ್ರಮಕ್ಕೆ ಸಂಬಂಧಿಸಿದ ದೀರ್ಘಕಾಲದ ಕಾನೂನು ವಿವಾದಗಳಿಗೆ ಸಂಬಂಧಿಸಿದ ಉದ್ದೇಶಪೂರ್ವಕ ಪಿತೂರಿ ಈ ಘಟನೆ ಎಂದು ವಕೀಲ ಮೊಯಿಜುದ್ದೀನ್ ಅವರ ಕುಟುಂಬ ಆರೋಪಿಸಿದೆ. ಮೊಯಿಜುದ್ದೀನ್ ಅವರು ವಕ್ಫ್ ಆಸ್ತಿಗಳ ಅಕ್ರಮ ಆಕ್ರಮಣ ಮತ್ತು ಖಾಸಗೀಕರಣಕ್ಕೆ ಸಂಬಂಧಿಸಿದ ಹಲವಾರು ಪ್ರಕರಣಗಳಲ್ಲಿ ಹೋರಾಡುತ್ತಿದ್ದಾರೆ ಎಂದು ಅವರ ಮಗ ಮತ್ತು ವಕೀಲ ಮೊಹಮ್ಮದ್ ಫರ್ಹಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ, ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ..!

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಮದುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಭೀಕರ ತಿರುವು, ತಿರುಪತಿಯಲ್ಲಿ ಡಬಲ್ ಮರ್ಡರ್