ತಮಿಳುನಾಡು ಸಿಎಂ ವಿಜಯ್ 
ದೇಶ

ಲೈಂಗಿಕ ಅಪರಾಧಗಳನ್ನು ಹತ್ತಿಕ್ಕುವಂತೆ ಪೊಲೀಸರಿಗೆ ತಮಿಳುನಾಡು ಸಿಎಂ ವಿಜಯ್ ಖಡಕ್ ಸೂಚನೆ

ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಸೋಮವಾರ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತಕ್ಷಣ ಪ್ರಕರಣಗಳನ್ನು ದಾಖಲಿಸಿ, ತ್ವರಿತವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಖಾತರಿಪಡಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕ್ರೂರ ಹತ್ಯೆಯ ನಂತರ, ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಪರಿಶೀಲನಾ ಸಭೆಯಲ್ಲಿ, ವಿಚಾರಣೆಯನ್ನು ತ್ವರಿತಗೊಳಿಸಲು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ, ಅಟಾರ್ನಿ ಜನರಲ್‌ಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂ. ಸಾಯಿಕುಮಾರ್, ಗೃಹ ಕಾರ್ಯದರ್ಶಿ ಕೆ. ಮಣಿವಾಸನ್, ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್, ಸಮಾಜ ಕಲ್ಯಾಣ ಮತ್ತು ಮಹಿಳಾ ಹಕ್ಕುಗಳ ಇಲಾಖೆಯ ಕಾರ್ಯದರ್ಶಿ ಮರಿಯಂ ಪಲ್ಲವಿ ಬಲದೇವ್, ಪೊಲೀಸ್ ಮಹಾನಿರ್ದೇಶಕ ಸಂದೀಪ್ ರಾಯ್ ರಾಥೋಡ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

'ಡಿಜಿಟಲ್ ಅರೆಸ್ಟ್': 24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ನಿವೃತ್ತ ಶಿಕ್ಷಕಿ; ವಿವಿಧ ರಾಜ್ಯಗಳ ಆರು ಜನರ ಬಂಧನ!

ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ: ಆದ್ರೆ...ಇರಾನ್ ಹೇಳಿದ್ದೇನು?

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

SCROLL FOR NEXT