ಕೆಸಿ ವೇಣುಗೋಪಾಲ್ 
ದೇಶ

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

ಇಂದು ನಾವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಿವರವಾದ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದ್ದರು.

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.

ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ಸಭೆ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಗಂಭೀರ ಚರ್ಚೆಯಾಗಿದೆ. ಇನ್ನು ಸಾಧಕ-ಬಾಧಕಗಳ ಬಗ್ಗೆಯೂ ಸಹ ಸಿದ್ದರಾಮಯ್ಯನವರು, ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

6 ಗಂಟೆಗಳ ಮ್ಯಾರಥಾನ್‌ ಸಭೆಯ ಬಳಿಕ ಸಂಜೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ನಾವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಿವರವಾದ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಮತ್ತು ನಾನು ಭಾಗವಹಿಸಿದ್ದೇವು.

ಇಂದು ಇಡೀ ಚರ್ಚೆಯು ಮುಂಬರುವ ರಾಜ್ಯಸಭಾ ಚುನಾವಣೆ ಮತ್ತು ಕರ್ನಾಟಕದ ವಿಧಾನ ಪರಿಷತ್ ಚುನಾವಣೆಗಳ ಮೇಲೆ ಮಾತ್ರ ಕೇಂದ್ರೀಕೃತವಾಗಿತ್ತು. ನೀವು ಏನೇ ಊಹಾಪೋಹ ಮಾಡುತ್ತಿದ್ದರೂ ಅದು ಕೇವಲ ಊಹಾಪೋಹ. ವಾಸ್ತವವೇ ಬೇರೆ. ಇಂದು ನಾವು ಕರ್ನಾಟಕದ ರಾಜ್ಯಸಭಾ ಸ್ಥಾನಗಳು ಮತ್ತು ಪರಿಷತ್ ಸ್ಥಾನಗಳ ಬಗ್ಗೆ ಚರ್ಚಿಸಿದ್ದೇವೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನಂತಹ ಇತರ ಸ್ಥಾನಗಳ ಜೊತೆಗೆ ಕರ್ನಾಟಕದ ರಾಜ್ಯಸಭಾ ಮತ್ತು ಪರಿಷತ್ ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರ ಘೋಷಿಸಲಾಗುವುದು. ಇಂದು ನಾವು ನಿರ್ಧರಿಸಿದ್ದು ಇದನ್ನೇ, ಬೇರೆ ಯಾವುದೇ ವಿಚಾರ ಚರ್ಚೆ ಬಂದಿಲ್ಲ ಎಂದು ವೇಣುಗೋಪಾಲ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT