ಪಳನಿಸ್ವಾಮಿ ಜೊತೆಗೆ ಎಸಕ್ಕಿ ಸುಬಯಾ 
ದೇಶ

ತಮಿಳುನಾಡು: ನಿನ್ನೆ ಮೂವರು, ಇಂದು ಮತ್ತೋರ್ವ AIADMK ಶಾಸಕ ರಾಜೀನಾಮೆ, ಟಿವಿಕೆಗೆ ಸೇರ್ಪಡೆ!

ಅಂಬಸಮುದ್ರಂ ಶಾಸಕರಾದ ಎಸಕ್ಕಿ ಸುಬಯಾ, ಸೆಕ್ರೆಟರಿಯೇಟ್‌ನಲ್ಲಿ ಸ್ಪೀಕರ್‌ಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಚೆನ್ನೈ: ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾದ AIADMK ಯಲ್ಲಿ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಬ್ಬರಾದ ನಂತರ ಮತ್ತೊಬ್ಬರಂತೆ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ.

ಸೋಮವಾರ ಮೂವರು ಶಾಸಕರು ರಾಜೀನಾಮೆ ನೀಡಿದ್ದರು. ಇಂದು ಮತ್ತೋರ್ವ ಶಾಸಕರು ರಾಜೀನಾಮೆ ನೀಡಿದ್ದು, ವಿಜಯ್ ನೇತೃತ್ವದ ಟಿವಿಕೆ ಗೆ ಸೇರ್ಪಡೆಯಾಗಿದ್ದಾರೆ. AIADMK ಶಾಸಕರಾದ ಎಸಕ್ಕಿ ಸುಬಯಾ ಮಂಗಳವಾರ ವಿಧಾನಸಭಾ ಸ್ಪೀಕರ್ ಜೆ ಸಿ ಡಿ ಪ್ರಭಾಕರ್ ಅವರನ್ನು ಭೇಟಿ ಮಾಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಅಂಬಸಮುದ್ರಂ ಶಾಸಕರಾದ ಎಸಕ್ಕಿ ಸುಬಯಾ, ಸೆಕ್ರೆಟರಿಯೇಟ್‌ನಲ್ಲಿ ಸ್ಪೀಕರ್‌ಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ನಿಯಮಗಳಿಗೆ ಅನುಗುಣವಾಗಿಲ್ಲದ ಕಾರಣ ಆರಂಭದಲ್ಲಿ ಅದನ್ನು ಸ್ವೀಕರಿಸಲು ಸ್ಪೀಕರ್ ನಿರಾಕರಿಸಿದರು. ತಕ್ಷಣ ಸುಬಯಾ ಟೈಪ್ ಮಾಡಿದ ಪತ್ರವನ್ನು ಹಿಂಪಡೆದು, ಕೆಲವೇ ನಿಮಿಷಗಳಲ್ಲಿ ಕೈಬರಹದ ಪತ್ರವನ್ನು ಸಲ್ಲಿಸಿದರು, ಅದನ್ನು ಪ್ರಭಾಕರ್ ಅಂಗೀಕರಿಸಿದ್ದಾರೆ.

ವಿಜಯ್ ಮೇ 13 ರಂದು ವಿಶ್ವಾಸಮತ ಯಾಚಿಸಿದಾಗ ಅವರನ್ನು ಬೆಂಬಲಿಸಿದ ಮಾಜಿ ರಾಜ್ಯ ಸಚಿವರಾದ ಸಿ ವೆ ಷಣ್ಮುಗಂ ಮತ್ತು ಎಸ್ ಪಿ ವೇಲುಮಣಿ ಬಣದಲ್ಲಿದ AIADMK ಶಾಸಕರಲ್ಲಿ ಸುಬಯಾ ಕೂಡ ಒಬ್ಬರಾಗಿದ್ದಾರೆ. ಎಐಎಡಿಎಂಕೆ ಶಾಸಕರಾದ ಮರಗತಮ್ ಕುಮಾರವೇಲ್, ಪಿ ಸತ್ಯಬಾಮ ಮತ್ತು ಎಸ್ ಜಯಕುಮಾರ್ ಅವರು ಸೋಮವಾರ ಸಂಜೆ ಟಿವಿಕೆಗೆ ಸೇರ್ಪಡೆಯಾದರು.

ಮುಂದಿನ ಉಪಚುನಾವಣೆಯಲ್ಲಿ ಪಕ್ಷದ ಶಿಳ್ಳೆ ಚಿಹ್ನೆಯ ಮೇಲೆ ಸ್ಪರ್ಧಿಸಲು ಈ ಮೂವರಿಗೆ ಟಿವಿಕೆ ಟಿಕೆಟ್‌ಗಳು ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT