ಸಿಎಂ ವಿಜಯ್  
ದೇಶ

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಈ ಯೋಜನೆಯು ರಾಜ್ಯಾದ್ಯಂತ 14.22 ಲಕ್ಷ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರದಿಂದ ಒಟ್ಟು ₹2,044 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸೋಮವಾರ ಸಣ್ಣ ರೈತರ ₹50,000 ವರೆಗಿನ ಸಹಕಾರಿ ಬ್ಯಾಂಕ್ ಬೆಳೆ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಅ್ ದೊಡ್ಡ ರೈತರಿಗೆ ₹5,000 ಪರಿಹಾರ ಪಾವತಿಯನ್ನು ಘೋಷಿಸಿದ್ದಾರೆ.

ಈ ಯೋಜನೆಯು ರಾಜ್ಯಾದ್ಯಂತ 14.22 ಲಕ್ಷ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರದಿಂದ ಒಟ್ಟು ₹2,044 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಬೆಳೆ ಸಾಲ ಬಾಕಿಯಿರುವ ರೈತರಿಗೆ ಪರಿಹಾರ ನೀಡುವ ಗುರಿಯೊಂದಿಗೆ ಮೇ 25 ರಂದು ಈ ಘೋಷಣೆಯನ್ನು ಮಾಡಿದರು.

ಈ ಯೋಜನೆಯಡಿಯಲ್ಲಿ, ₹50,000 ವರೆಗಿನ ಬಾಕಿ ಇರುವ ಸಣ್ಣ ರೈತರ ಬೆಳೆ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ. ಈ ಮಧ್ಯೆ ದೊಡ್ಡ ರೈತರಿಗೆ ತಮ್ಮ ಬೆಳೆ ಸಾಲವನ್ನು ಮರುಪಾವತಿಸಲು ₹5,000 ಪರಿಹಾರ ಮೊತ್ತವನ್ನು ನೀಡಲಾಗುತ್ತದೆ. ಈ ಕ್ರಮದಿಂದ ರೈತರ ಕೃಷಿ ಚಟುವಟಿಕೆಗಳಿಗಾಗಿ ಬೆಂಬಲ ಒದಗಿಸುವ ನಿರೀಕ್ಷೆಯಿದೆ ಎಂದು ಸರ್ಕಾರ ಹೇಳಿದೆ.

ಆದಾಗ್ಯೂ, ಯೋಜನೆಯ ಅನುಷ್ಠಾನದ ಸಮಯ ಅಥವಾ ಮನ್ನಾ ಮೊತ್ತವನ್ನು ವಿತರಿಸುವ ಪ್ರಕ್ರಿಯೆಯ ಕುರಿತು ರಾಜ್ಯ ಸರ್ಕಾರವು ತಕ್ಷಣ ವಿವರಗಳನ್ನು ನೀಡಲಿಲ್ಲ. ಈ ಯೋಜನೆಯಡಿ ಸಣ್ಣ ಮತ್ತು ದೊಡ್ಡ ರೈತರ ವರ್ಗೀಕರಣಕ್ಕೆ ಅರ್ಹತಾ ಮಾನದಂಡಗಳನ್ನು ಸಹ ಇದು ನಿರ್ದಿಷ್ಟಪಡಿಸಿಲ್ಲ.

ದೇಶಾದ್ಯಂತ ರಾಜ್ಯ ಸರ್ಕಾರಗಳು ಕೃಷಿ ಕ್ಷೇತ್ರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಕ್ರಮಗಳನ್ನು ಪರಿಚಯಿಸುತ್ತಿರುವುದರಿಂದ ಬೆಳೆ ಸಾಲ ಮನ್ನಾ ಘೋಷಣೆ ಬಂದಿದೆ.

ಈ ಯೋಜನೆಯ ಒಟ್ಟು ವೆಚ್ಚ ₹2,044 ಕೋಟಿಗಳಾಗಿದ್ದು, ರಾಜ್ಯಾದ್ಯಂತ ಸಹಕಾರಿ ಬ್ಯಾಂಕಿಂಗ್ ಮಾರ್ಗಗಳ ಮೂಲಕ 14.22 ಲಕ್ಷ ಫಲಾನುಭವಿಗಳನ್ನು ಒಳಗೊಳ್ಳಲಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

SCROLL FOR NEXT