ಅಮಿತ್ ಶಾ 
ದೇಶ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಬಿಕಾನೇರ್‌: ಅಂತರಾಷ್ಟ್ರೀಯ ಗಡಿಗಳಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮ ನಿರ್ಮಾಣಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಹಲವು ವರ್ಷಗಳಿಂದ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳನ್ನು ಕೆಡವಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ, ಭಾರತ-ಪಾಕಿಸ್ತಾನ ಗಡಿಯಲ್ಲಿರುವ ರಾಜಸ್ಥಾನದ ಗಡಿ ಜಿಲ್ಲೆಗಳಿಗೆ ಸಂಬಂಧಿಸಿದ ಭದ್ರತಾ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಿದರು.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಅಪರಾಧಗಳು ಮತ್ತು ಮಾದಕವಸ್ತು ಪಿಡುಗಿನ ಮೂಲಗಳು, ಮಾದರಿಗಳು ಮತ್ತು ಜಾಲಗಳ ಬಗ್ಗೆ ಆಳವಾದ ಅಧ್ಯಯನವನ್ನು ಕೈಗೊಳ್ಳಲು ಹಾಗೂ ಈ ಸಮಸ್ಯೆಗಳು ಮತ್ತೆ ಉದ್ಭವಿಸದಂತೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಲು ಗಡಿ ಜಿಲ್ಲೆಗಳಿಗೆ ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಗಡಿ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ವಹಿವಾಟುಗಳ ಕಾನೂನು ಮತ್ತು ಆರ್ಥಿಕ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲು, ಅವುಗಳ ಹಣಕಾಸಿನ ಮೂಲಗಳನ್ನು ಪರಿಶೀಲಿಸಲು, ಮ್ಯೂಲ್ ಖಾತೆಗಳು ಮತ್ತು ಸುಳ್ಳು ಕಂಪನಿಗಳನ್ನು ಪತ್ತೆಹಚ್ಚಲು, ನಕಲಿ ಆಧಾರ್ ಕಾರ್ಡ್‌ಗಳನ್ನು ಗುರುತಿಸಲು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಯನ್ನು ನಿಯಂತ್ರಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!