ಸಾಂದರ್ಭಿಕ ಚಿತ್ರ 
ದೇಶ

ಘೋರ ದುರಂತ: ಬಾಬೇಸಿಯಾ ಸೋಂಕಿನಿಂದ ಎಂಟು ಸಿಂಹದ ಮರಿಗಳ ಸಾವು!

ಸೋಂಕು ಹರಡುವುದನ್ನು ತಡೆಗಟ್ಟಲು, ಸೋಂಕು ವರದಿಯಾದ ಪ್ರದೇಶಗಳ 10 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸಿಂಹಗಳನ್ನು ಅಧಿಕಾರಿಗಳು ಪ್ರತ್ಯೇಕಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್: ಗುಜರಾತ್‌ನ ಗಿರ್ ಸೋಮನಾಥ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಶಂಕಿತ 'ಬಾಬೇಸಿಯಾ' ಸೋಂಕಿನಿಂದ ಎಂಟು ಸಿಂಹದ ಮರಿಗಳು ಸಾವನ್ನಪ್ಪಿವೆ ಎಂದು ರಾಜ್ಯ ಅರಣ್ಯ ಸಚಿವ ಅರ್ಜುನ್ ಮೋಧ್ವಾಡಿಯಾ ಅವರು ಶುಕ್ರವಾರ ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು, ಸೋಂಕು ವರದಿಯಾದ ಪ್ರದೇಶಗಳ 10 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸಿಂಹಗಳನ್ನು ಅಧಿಕಾರಿಗಳು ಪ್ರತ್ಯೇಕಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

"ಬಾಬೇಸಿಯಾ ಸಂಬಂಧಿತ ಶಂಕಿತ ಪ್ರಕರಣಗಳಲ್ಲಿ, ಎಂಟು ಸಿಂಹದ ಮರಿಗಳ ಸಾವು ಬೆಳಕಿಗೆ ಬಂದಿದೆ" ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ಪರಾವಲಂಬಿ ಕಾಯಿಲೆಯಾದ ಬಾಬೇಸಿಯಾ, ಉಣ್ಣಿಗಳ ಮೂಲಕ ಹರಡುತ್ತದೆ ಮತ್ತು ಪೀಡಿತ ಪ್ರಾಣಿಗಳಲ್ಲಿ ದೌರ್ಬಲ್ಯ, ಕೆಮ್ಮು ಹಾಗೂ ಮೂಗಿನಿಂದ ರಕ್ತ ಸ್ರಾವವನ್ನು ಉಂಟುಮಾಡಬಹುದು.

ಗಿರ್ ಅಭಯಾರಣ್ಯದ ಹೊರಗಿನ ಕಂದಾಯ ಪ್ರದೇಶಗಳಲ್ಲಿ, ವಿಶೇಷವಾಗಿ ಗಿರ್ ಸೋಮನಾಥ್‌ನ ಗಿರ್ ಗಧಾಡ ಮತ್ತು ಅಮ್ರೇಲಿ ಜಿಲ್ಲೆಗಳ ಬಾಬ್ರಾ ಕೋಟ್‌ನಲ್ಲಿ ಶಂಕಿತ ಬಾಬೇಸಿಯಾ ಸೋಂಕಿನಿಂದ ಸಿಂಹದ ಮರಿಗಳ ಸಾವು ವರದಿಯಾಗಿದೆ ಎಂದು ಅವರು ಹೇಳಿದ್ದಾರೆ.

ಪಶುವೈದ್ಯಕೀಯ ವೈದ್ಯರ ತಂಡವು, ಮೃತ ಮರಿಗಳ ಮಾದರಿಗಳನ್ನು ಸಂಗ್ರಹಿಸಿ, ಅವುಗಳನ್ನು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮೋಧ್ವಾಡಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಆರು ಜನರ ಭೀಕರ ಹತ್ಯೆ

Karnataka CM News LIVE Updates | ನೂತನ ಸಚಿವ ಸಂಪುಟ ರಚನೆ: ದೆಹಲಿಯಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಮಾತುಕತೆ, ಸಹಭೋಜನ

ಮಧ್ಯಪ್ರಾಚ್ಯ ಬಿಕ್ಕಟ್ಟು, ದುರ್ಬಲ Monsoon ಆತಂಕ; Indian Stock Market ಭಾರಿ ಕುಸಿತ!

ಹೊಸ ವರ್ಷದಿಂದ ಎಲ್ಲ Kwality Walls ಐಸ್ ಕ್ರೀಮ್ ಗಳು ಹಾಲು ಆಧಾರಿತ: CEO Peter ter Kulve ಹೇಳಿಕೆ, ಹಾಗಾದ್ರೆ ಇಷ್ಟು ದಿನ ನಾವ್ ತಿಂದಿದ್ದೇನು?

ಹಾರ್ದಿಕ್ ಪಾಂಡ್ಯ ಮುಂದಿನ ನಡೆ ಏನು! 2027 IPL ನಲ್ಲಿ ಯಾವ ತಂಡ ಸೇರಬಹುದು?

SCROLL FOR NEXT