ಸಾಂದರ್ಭಿಕ ಚಿತ್ರ 
ದೇಶ

ಘೋರ ದುರಂತ: ಬಾಬೇಸಿಯಾ ಸೋಂಕಿನಿಂದ ಎಂಟು ಸಿಂಹದ ಮರಿಗಳ ಸಾವು!

ಸೋಂಕು ಹರಡುವುದನ್ನು ತಡೆಗಟ್ಟಲು, ಸೋಂಕು ವರದಿಯಾದ ಪ್ರದೇಶಗಳ 10 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸಿಂಹಗಳನ್ನು ಅಧಿಕಾರಿಗಳು ಪ್ರತ್ಯೇಕಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್: ಗುಜರಾತ್‌ನ ಗಿರ್ ಸೋಮನಾಥ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ ಶಂಕಿತ 'ಬಾಬೇಸಿಯಾ' ಸೋಂಕಿನಿಂದ ಎಂಟು ಸಿಂಹದ ಮರಿಗಳು ಸಾವನ್ನಪ್ಪಿವೆ ಎಂದು ರಾಜ್ಯ ಅರಣ್ಯ ಸಚಿವ ಅರ್ಜುನ್ ಮೋಧ್ವಾಡಿಯಾ ಅವರು ಶುಕ್ರವಾರ ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು, ಸೋಂಕು ವರದಿಯಾದ ಪ್ರದೇಶಗಳ 10 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸಿಂಹಗಳನ್ನು ಅಧಿಕಾರಿಗಳು ಪ್ರತ್ಯೇಕಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

"ಬಾಬೇಸಿಯಾ ಸಂಬಂಧಿತ ಶಂಕಿತ ಪ್ರಕರಣಗಳಲ್ಲಿ, ಎಂಟು ಸಿಂಹದ ಮರಿಗಳ ಸಾವು ಬೆಳಕಿಗೆ ಬಂದಿದೆ" ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ಪರಾವಲಂಬಿ ಕಾಯಿಲೆಯಾದ ಬಾಬೇಸಿಯಾ, ಉಣ್ಣಿಗಳ ಮೂಲಕ ಹರಡುತ್ತದೆ ಮತ್ತು ಪೀಡಿತ ಪ್ರಾಣಿಗಳಲ್ಲಿ ದೌರ್ಬಲ್ಯ, ಕೆಮ್ಮು ಹಾಗೂ ಮೂಗಿನಿಂದ ರಕ್ತ ಸ್ರಾವವನ್ನು ಉಂಟುಮಾಡಬಹುದು.

ಗಿರ್ ಅಭಯಾರಣ್ಯದ ಹೊರಗಿನ ಕಂದಾಯ ಪ್ರದೇಶಗಳಲ್ಲಿ, ವಿಶೇಷವಾಗಿ ಗಿರ್ ಸೋಮನಾಥ್‌ನ ಗಿರ್ ಗಧಾಡ ಮತ್ತು ಅಮ್ರೇಲಿ ಜಿಲ್ಲೆಗಳ ಬಾಬ್ರಾ ಕೋಟ್‌ನಲ್ಲಿ ಶಂಕಿತ ಬಾಬೇಸಿಯಾ ಸೋಂಕಿನಿಂದ ಸಿಂಹದ ಮರಿಗಳ ಸಾವು ವರದಿಯಾಗಿದೆ ಎಂದು ಅವರು ಹೇಳಿದ್ದಾರೆ.

ಪಶುವೈದ್ಯಕೀಯ ವೈದ್ಯರ ತಂಡವು, ಮೃತ ಮರಿಗಳ ಮಾದರಿಗಳನ್ನು ಸಂಗ್ರಹಿಸಿ, ಅವುಗಳನ್ನು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮೋಧ್ವಾಡಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್