ಶಿವಸೇನೆ ಮುಖಂಡ ಸಂಜಯ್ ರಾವತ್ 
ದೇಶ

ಇಂತಹ ಸುಗಮ ಅಧಿಕಾರ ಹಸ್ತಾಂತರ ಅಪರೂಪ, ಸಿದ್ದರಾಮಯ್ಯ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ: ಶಿವಸೇನೆ ನಾಯಕ ಸಂಜಯ್ ರಾವತ್; Video

ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ನಡೆಸಿದ ಈ "ಸುಗಮ ಅಧಿಕಾರ ಹಸ್ತಾಂತರ" ಯಾವುದೇ ರಾಜ್ಯದಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ.

ಮುಂಬೈ: ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಸಿದ್ದರಾಮಯ್ಯ ಅವರು ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಸಂಜಯ್ ರಾವತ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಕರ್ನಾಟಕ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ನಡೆಸಿದ ಈ "ಸುಗಮ ಅಧಿಕಾರ ಹಸ್ತಾಂತರ" ಯಾವುದೇ ರಾಜ್ಯದಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ. ಸಿದ್ದರಾಮಯ್ಯ ಅವರ ಬಗ್ಗೆ ನನ್ನ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಅಧಿಕಾರ ತ್ಯಜಿಸುವುದು ಸಾಮಾನ್ಯ ವಿಷಯವಲ್ಲ. “ಸಾಮಾನ್ಯವಾಗಿ ಯಾರೂ ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನ ಬಿಟ್ಟುಕೊಡುವುದಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ್ದಾರೆ. ಇದು ರಾಷ್ಟ್ರೀಯ ರಾಜಕೀಯದಲ್ಲಿ ಅಪರೂಪದ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಪಕ್ಷದ ತೀರ್ಮಾನಕ್ಕೆ ಬದ್ಧತೆ ತೋರಿರುವುದು ರಾಜಕೀಯ ಪ್ರೌಢತೆಯ ಸಂಕೇತ. “ರಾಜಕೀಯದಲ್ಲಿ ಅಧಿಕಾರಕ್ಕಾಗಿ ಹೋರಾಟ ಸಾಮಾನ್ಯ. ಆದರೆ, ಪಕ್ಷದ ಆದೇಶಕ್ಕೆ ಮಣಿದು ಸುಗಮವಾಗಿ ಅಧಿಕಾರ ಹಸ್ತಾಂತರ ಮಾಡಿರುವುದು ದೊಡ್ಡ ವಿಷಯ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಒಳರಾಜಕೀಯ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ದೇಶದ ರಾಜಕೀಯ ವಲಯದಲ್ಲೂ ಗಮನ ಸೆಳೆದಿವೆ.

ಸಿದ್ದರಾಮಯ್ಯ ಅವರ ರಾಜೀನಾಮೆಯ ಬಳಿಕ ಡಿಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಬೆಳವಣಿಗೆ ಬಗ್ಗೆ ವಿವಿಧ ಪಕ್ಷಗಳ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

ಉಕ್ರೇನ್ ಮೇಲೆ ರಷ್ಯಾ ನ್ಯೂಕ್ಲಿಯರ್ ಬಾಂಬ್ ದಾಳಿ ನಡೆಸದಂತೆ ತಡೆದದ್ದು ಮೋದಿ: ಹೀಗೆ ಹೇಳಿದ್ದು ಯಾರು ಗೊತ್ತಾ?

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸಿದ ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!