ಸುಪ್ರೀಂ ಕೋರ್ಟ್ 
ದೇಶ

ಕಾಯ್ದಿರಿಸಿದ ತೀರ್ಪುಗಳನ್ನು 3 ತಿಂಗಳಲ್ಲಿ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ

ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡುವಂತೆ ಸೂಚಿಸಿದೆ.

ನವದೆಹಲಿ: ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ಹೊರಡಿಸಿದೆ.

ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್‌, ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡುವಂತೆ ಒತ್ತಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ತೀರ್ಪು ಪ್ರಕಟಿಸಲು ವಿಳಂಬವಾಗುವುದರಿಂದ ಅರ್ಜಿದಾರರಿಗೆ ತುಂಬಲಾರದ ನಷ್ಟ ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರ ಅತ್ಯಗತ್ಯ ಎಂದು ಕೋರ್ಟ್ ಒತ್ತಿ ಹೇಳಿದೆ. ವಿಶೇಷವಾಗಿ ಜಾಮೀನು ಅರ್ಜಿಗಳನ್ನು ಸಾಧ್ಯವಾದರೆ ಅದೇ ದಿನವೇ ವಿಲೇವಾರಿ ಮಾಡಬೇಕು ಎಂದು ಸೂಚಿಸಿದೆ.

ಒಂದು ವೇಳೆ ಆದೇಶವನ್ನು ಕಾಯ್ದಿರಿಸಿದರೆ, ಮುಂದಿನ ದಿನದೊಳಗೆ ತೀರ್ಪು ಪ್ರಕಟಿಸಿ ಅಪ್‌ಲೋಡ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಜಾಮೀನು ಮಂಜೂರು ಅಥವಾ ಶಿಕ್ಷೆ ಅಮಾನತು ಆದೇಶಗಳನ್ನು ಕೂಡ ತಕ್ಷಣವೇ ಜೈಲು ಅಧಿಕಾರಿಗಳಿಗೆ ತಲುಪಿಸಬೇಕು. ಅದರಂತೆ ಆರೋಪಿಯನ್ನು ಅಥವಾ ಶಿಕ್ಷಿತನನ್ನು ಸಾಧ್ಯವಾದರೆ ಅದೇ ದಿನ, ಇಲ್ಲವೇ ಮುಂದಿನ ದಿನ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ