ಮಮತಾ ಬ್ಯಾನರ್ಜಿ TNIE
ದೇಶ

ಆಡಳಿತಗಾರರು ಕೊಲೆಗಾರರಾಗಿದ್ದಾರೆ, BJP ನಾಚಿಕೆಪಡಬೇಕು: ಸೋದರಳಿಯ ಅಭಿಷೇಕ್ ಮೇಲಿನ ದಾಳಿ ಖಂಡಿಸಿದ ಮಮತಾ!

ಸೋನಾರ್ಪುರದಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ.

ಕೋಲ್ಕತ್ತಾ: ಸೋನಾರ್ಪುರದಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದು ಈ ಘಟನೆಯ ಹಿಂದೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೈವಾಡವಿದೆ ಎಂದು ಆರೋಪಿಸಿದರು. ಚುನಾವಣಾ ನಂತರದ ಹಿಂಸಾಚಾರದ ಬಲಿಪಶುಗಳ ಕುಟುಂಬಗಳನ್ನು ಭೇಟಿ ಮಾಡಲು ಅಭಿಷೇಕ್ ಬ್ಯಾನರ್ಜಿ ದಕ್ಷಿಣ 24 ಪರಗಣದ ಸೋನಾರ್ಪುರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಸ್ಥಳೀಯರು ಅವರ ಮೇಲೆ ಹಲ್ಲೆ ನಡೆಸಿದರು. ಅಪರಿಚಿತ ವ್ಯಕ್ತಿಗಳು ಸಂಸದರ ಮೇಲೆ ಕಲ್ಲು, ಬೂಟು ಮತ್ತು ಮೊಟ್ಟೆಗಳನ್ನು ಎಸೆದು ಹಲ್ಲೆ ಮಾಡಲು ಸಹ ಪ್ರಯತ್ನಿಸಿದರು. ಜನರು ಅಭಿಷೇಕ್ ವಿರುದ್ಧ 'ಕಳ್ಳ, ಕಳ್ಳ' ಎಂದು ಕೂಗಿದರು.

ಘಟನೆಯ ನಂತರ, ಮಮತಾ ಬ್ಯಾನರ್ಜಿ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ತೆರಳಿದ್ದು ಅಭಿಷೇಕ್ ಬ್ಯಾನರ್ಜಿ ಆರೋಗ್ಯ ವಿಚಾರಿಸಿದರು. ಆಡಳಿತಗಾರರು ಕೊಲೆಗಾರರಾಗಿದ್ದಾರೆ, ಬಿಜೆಪಿ ನಾಚಿಕೆಪಡಬೇಕು ಎಂದು ಮಮತಾ ಬ್ಯಾನರ್ಜಿ X ನಲ್ಲಿ ಬರೆದುಕೊಂಡಿದ್ದಾರೆ. ದಾಳಿಯ ವೀಡಿಯೊ ಕಾಣಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಜಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

ಪ್ರತಿಭಟನಾಕಾರರು ತೃಣಮೂಲ ಪ್ರಧಾನ ಕಾರ್ಯದರ್ಶಿಯನ್ನು ಗುರಿಯಾಗಿಸಿಕೊಂಡಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆ ರಾಜಕೀಯ ಪ್ರೇರಿತ ಎಂದು ತೃಣಮೂಲ ನಾಯಕರು ಆರೋಪಿಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಭೇಟಿಗಳನ್ನು ಅಡ್ಡಿಪಡಿಸಲು ಬಿಜೆಪಿ ಈ ದಾಳಿಯನ್ನು ಆಯೋಜಿಸಿದೆ ಎಂದು ಆರೋಪಿಸಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಸೋನಾರ್ಪುರದಲ್ಲಿ ಚುನಾವಣಾ ನಂತರದ ಹಿಂಸಾಚಾರದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಅತ್ಯಂತ ಕಳವಳಕಾರಿ ಎಂದು ಅವರು ಹೇಳಿದರು. ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಸಾಕಷ್ಟು ಪೊಲೀಸ್ ರಕ್ಷಣೆ ಇಲ್ಲದಿರುವುದು ಬಿಜೆಪಿಯ ಸೇಡು ಮತ್ತು ದಬ್ಬಾಳಿಕೆಯ ರಾಜಕೀಯವನ್ನು ಪ್ರತಿಬಿಂಬಿಸುತ್ತದೆ ಎಂದು ಖರ್ಗೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT