General NS Raja Subramani 
ದೇಶ

ಭಾರತೀಯ ಸೇನೆಗೆ ನೂತನ ಸಾರಥಿ: CDS ಆಗಿ ಎನ್‌ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!

ಸೇನಾ ಸಂಘಟನೆಗಳಲ್ಲಿ ಸುಧಾರಣೆ, ಸಶಸ್ತ್ರ ಪಡೆಗಳ ಪರಿವರ್ತನೆ ಹಾಗೂ ಮೂರು ಸೇನೆಗಳ ನಡುವೆ ಹೆಚ್ಚಿನ ಸಮನ್ವಯತೆ ಸಾಧಿಸುವುದು ತಮ್ಮ ತಕ್ಷಣದ ಆದ್ಯತೆಯಾಗಿದೆ.

ನವದೆಹಲಿ: ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥ (CDS)ರಾಗಿ ಜನರಲ್ ಎನ್‌ಎಸ್ ರಾಜಾ ಸುಬ್ರಮಣಿ ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದೇಶದ ಮೂರು ಸೇನೆಗಳ ಸಮನ್ವಯ, ಏಕೀಕೃತ ಸೇನಾ ಕಮಾಂಡ್ ವ್ಯವಸ್ಥೆ ಹಾಗೂ ರಕ್ಷಣಾ ಪಡೆಗಳ ಆಧುನೀಕರಣಕ್ಕೆ ವೇಗ ನೀಡುವುದು ಅವರ ಪ್ರಮುಖ ಗುರಿಯಾಗಿದೆ.

ನಿವೃತ್ತರಾಗಿರುವ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ಎನ್‌ಎಸ್ ರಾಜಾ ಸುಬ್ರಮಣಿ ಅವರು ಭರ್ತಿ ಮಾಡಿದ್ದು, ದೇಶದ ಉನ್ನತ ಸೇನಾ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸೇನಾ ಸಂಘಟನೆಗಳಲ್ಲಿ ಸುಧಾರಣೆ, ಸಶಸ್ತ್ರ ಪಡೆಗಳ ಪರಿವರ್ತನೆ ಹಾಗೂ ಮೂರು ಸೇನೆಗಳ ನಡುವೆ ಹೆಚ್ಚಿನ ಸಮನ್ವಯತೆ ಸಾಧಿಸುವುದು ತಮ್ಮ ತಕ್ಷಣದ ಆದ್ಯತೆಯಾಗಿದೆ ಎಂದು ಹೇಳಿದರು.

“ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಶಸ್ತ್ರಾಸ್ತ್ರಗಳ ಅಭಿವೃದ್ಧಿ, ಸೇನೆಗೆ ಸೇರ್ಪಡೆ ಹಾಗೂ ಅವುಗಳ ಸಮಗ್ರ ಬಳಕೆಗೆ ವೇಗ ನೀಡುತ್ತೇವೆಂದು ತಿಳಿಸಿದ್ದಾರೆ.

ಇದೇ ವೇಳೆ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಅನುಗುಣವಾಗಿ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಸಿಡಿಎಸ್ ಆಗಿ ರಾಜಾ ಸುಬ್ರಮಣಿ ಅವರ ಪ್ರಮುಖ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಿಲಿಟರಿ ಥಿಯೇಟರೈಸೇಶನ್ ಯೋಜನೆ ಜಾರಿಗೊಳಿಸುವುದಾಗಿದೆ. ಇದರಡಿ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯ ಕಾರ್ಯಾಚರಣೆಗಳನ್ನು ಏಕೀಕೃತ ಕಮಾಂಡ್ ವ್ಯವಸ್ಥೆಯಡಿ ತರಲು ಪ್ರಯತ್ನಿಸಲಾಗುತ್ತಿದೆ.

ನಾಲ್ಕು ದಶಕಗಳ ವಿಶಿಷ್ಟ ಸೇನಾ ಸೇವೆ

ಸುಮಾರು 40 ವರ್ಷಗಳ ಸೇನಾ ಸೇವೆಯಲ್ಲಿ ರಾಜಾ ಸುಬ್ರಮಣಿ ವಿವಿಧ ಕಮಾಂಡ್, ಆಡಳಿತ ಹಾಗೂ ತರಬೇತಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು 2024ರಿಂದ 2025ರವರೆಗೆ ಉಪ ಸೇನಾ ಮುಖ್ಯಸ್ಥರಾಗಿ (Vice Chief of Army Staff) ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಕೇಂದ್ರ ಕಮಾಂಡ್‌ನ ಮುಖ್ಯಸ್ಥರಾಗಿದ್ದರು.

1985ರ ಡಿಸೆಂಬರ್‌ನಲ್ಲಿ ಗರ್ವಾಲ್ ರೈಫಲ್ಸ್'ನ 8ನೇ ಬಟಾಲಿಯನ್‌ಗೆ ಸೇರ್ಪಡೆಯಾದ ಅವರು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ಭಾರತೀಯ ಸೇನಾ ಅಕಾಡೆಮಿ, ಯುಕೆಯ ಜಾಯಿಂಟ್ ಸರ್ವೀಸಸ್ ಕಮಾಂಡ್ ಅಂಡ್ ಸ್ಟಾಫ್ ಕಾಲೇಜು ಹಾಗೂ ನವದೆಹಲಿಯ ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ಕಜಕಿಸ್ತಾನದಲ್ಲಿ ರಕ್ಷಣಾ ಅಟ್ಯಾಶೆ, ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವೀಸಸ್ ಸ್ಟಾಫ್ ಕಾಲೇಜಿನ ಮುಖ್ಯ ತರಬೇತುದಾರ ಹಾಗೂ ಉತ್ತರ ಕಮಾಂಡ್‌ನ ಮುಖ್ಯ ಸಿಬ್ಬಂದಿ ಅಧಿಕಾರಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದಾರೆ.

ಅವರ ವಿಶಿಷ್ಟ ಸೇವೆಗೆ ಜನರಲ್ ಸುಬ್ರಮಣಿ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಮತ್ತು ವಿಶಿಷ್ಟ ಸೇವಾ ಪದಕ ಸೇರಿದಂತೆ ಹಲವು ಗೌರವಗಳು ಲಭಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ, BJP ವಿರುದ್ಧ ಆರೋಪ..!

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಭಾರೀ ಕಸರತ್ತು: ಸಿದ್ದು-ಡಿಕೆಶಿ ಬಣ ಸಮತೋಲನಕ್ಕೆ ಮಾಸ್ಟರ್‌ಪ್ಲ್ಯಾನ್, 11:11:11 ಫಾರ್ಮುಲಾಗೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

SCROLL FOR NEXT