ಅಭಿಷೇಕ್ ಬ್ಯಾನರ್ಜಿ 
ದೇಶ

ಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.

ಕೋಲ್ಕತ್ತಾ: ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಿಜೆಪಿ ಗೂಂಡಾಗಳು ಗುರುವಾರ ಬೆಳಗ್ಗೆ ಕೋಲ್ಕತ್ತಾದ ಕ್ಯಾಮಕ್ ಸ್ಟ್ರೀಟ್ ನಲ್ಲಿರುವ ಟಿಎಂಸಿ ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಮತ್ತು ವಕೀಲರಿಂದ ಪದೇ ಪದೇ ಕರೆಗಳು ಹಾಗೂ ಇಮೇಲ್‌ ಮಾಡಿದ್ದರ ಹೊರತಾಗಿಯೂ, ಕೋಲ್ಕತ್ತಾ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಸ್ಥಳಕ್ಕೆ ಬರಲಿಲ್ಲ. ಈ ವಿಳಂಬ "ಅತಿರೇಕ ಮತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ತಕ್ಷಣ ಬಂಧಿಸಬೇಕು ಮತ್ತು ಹಿಂಸಾಚಾರವನ್ನು ಯಾರು ಯೋಜಿಸಿದರು, ಸಂಘಟಿಸಿದರು ಮತ್ತು ನಿರ್ದೇಶಿಸಿದರು ಎಂಬುದರ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಅಭಿಷೇಕ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Video

ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಕರೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್