ರಾಹುಲ್ ಗಾಂಧಿ 
ದೇಶ

ಶಿಕ್ಷಣ ಒಂದು ಹಕ್ಕು, ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ನಿರ್ಲಕ್ಷ್ಯಕ್ಕೆ ಒಳಗಾಗಬಾರದು- ರಾಹುಲ್ ಗಾಂಧಿ

ಮಹಾರಾಷ್ಟ್ರದ ನಾಸಿಕ್‌ಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ನಿಯೋಗವೊಂದನ್ನು ಅವರು ಭೇಟಿಯಾಗಿದ್ದಾರೆ.

ನವದೆಹಲಿ: ಶಿಕ್ಷಣವು ಕೇವಲ ಸವಲತ್ತಲ್ಲ, ಬದಲಾಗಿ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕಾಗಿದೆ. ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ವ್ಯವಸ್ಥೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಬಾರದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ನಿಯೋಗವೊಂದನ್ನು ಅವರು ಭೇಟಿಯಾಗಿದ್ದಾರೆ.

'ಆಶ್ರಮ ಶಾಲೆ'ಗಳ ಸ್ಥಿತಿಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಈ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಶಿಕ್ಷಣವು ಸವಲತ್ತಲ್ಲ, ಇದು ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಹೇಳಿದ್ದಾರೆ.

ನಾಸಿಕ್ ಭೇಟಿಯ ವೇಳೆ ಬುಡಕಟ್ಟು ವಿದ್ಯಾರ್ಥಿಗಳ ನಿಯೋಗವನ್ನು ಭೇಟಿ ಮಾಡಿದ್ದು, ಅವರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ತಾಳ್ಮೆಯಿಂದ ಆಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೂ ತಮ್ಮ ಅಧ್ಯಯನಕ್ಕೆ ಸುರಕ್ಷಿತ ಮತ್ತು ಪೂರಕವಾದ ವಾತಾವರಣವನ್ನು ಹೊಂದುವ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ವ್ಯವಸ್ಥೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಬಾರದು, ಅವರಿಗೆ ವ್ಯವಸ್ಥೆಯ ಬೆಂಬಲ ಮತ್ತು ಸಾಧ್ಯವಿರುವ ಎಲ್ಲ ರೀತಿಯ ನೆರವಿನ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಈ ಬಾರಿ ಬ್ರಿಕ್ಸ್ ಶೃಂಗಸಭೆಯೇಕೆ ಮಹತ್ವವನ್ನು ಪಡೆದುಕೊಂಡಿದೆ? (ಹಣಕ್ಲಾಸು)

ಅಮಾನವೀಯ ಕೃತ್ಯ: ಆಸ್ತಿ ಮಾರಾಟ ಮಾಡಿದ್ದಕ್ಕೆ ಹೆತ್ತ ತಂದೆ, ತಾಯಿಗೆ ನಡು ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಸಹೋದರರು! Video

ಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾನೈಟ್ ಉದ್ಯಮಿ, ಜೆಮ್ ಗ್ರೂಪ್‌ ಅಧ್ಯಕ್ಷ ವೀರಮಣಿ ಬಂಧನ; ಪೆನ್ ಡ್ರೈವ್‌ನಿಂದ ಬಯಲಾಯಿತು ಹೀನ ಕೃತ್ಯ!