ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಹೊರಗೆ ಸಿಜೆಪಿ ಕಾರ್ಯಕರ್ತರ ಪ್ರತಿಭಟನೆ 
ದೇಶ

ಜಂತರ್ ಮಂತರ್‌ನಲ್ಲಿ ಹಲ್ಲೆ ಆರೋಪ: 72 ಗಂಟೆಗಳಲ್ಲಿ ಸ್ವತಂತ್ರ ಭಾರದ್ವಾಜ್‌ ಬಂಧಿಸುವುದಾಗಿ ದೆಹಲಿ ಪೊಲೀಸರ ಭರವಸೆ!

ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ "ತಲೆಬುರುಡೆ ಒಡೆದಿದ್ದಾಗಿ" ಮತ್ತು ಗಂಭೀರ ಅಪರಾಧದ ಹೊರತಾಗಿಯೂ ಜೈಲು ಶಿಕ್ಷೆಯಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದರು.

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿ ಪ್ರತಿಭಟನಾಕಾರ ನಿಶು ಆಜಾದ್ ತಂದೆ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಸ್ವತಂತ್ರ ಭಾರದ್ವಾಜ್‌ನನ್ನು 72 ಗಂಟೆಗಳೊಳಗೆ ಬಂಧಿಸುವುದಾಗಿ ದೆಹಲಿ ಪೊಲೀಸರು ಭರವಸೆ ನೀಡಿದ್ದಾರೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ಪ್ರತಿನಿಧಿಗಳು ಶುಕ್ರವಾರ ತಿಳಿಸಿದ್ದಾರೆ.

ಭಾರದ್ವಾಜ್ ಅವರ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಮರುದಿನವೇ ಈ ಭರವಸೆ ವ್ಯಕ್ತವಾಗಿದೆ. ತನ್ನನ್ನು ತಾನು 'ಹಿಂದುತ್ವ ಕಾರ್ಯಕರ್ತ' ಎಂದು ಕರೆದುಕೊಳ್ಳುವ ಭಾರದ್ವಾಜ್, ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ "ತಲೆಬುರುಡೆ ಒಡೆದಿದ್ದಾಗಿ" ಮತ್ತು ಗಂಭೀರ ಅಪರಾಧದ ಹೊರತಾಗಿಯೂ ಜೈಲು ಶಿಕ್ಷೆಯಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದರು.

ಹಲ್ಲೆ ನಡೆದಿದೆ ಎನ್ನಲಾದ ಜಂತರ್ ಮಂತರ್ ಪ್ರತಿಭಟನೆಯನ್ನು ಆಯೋಜಿಸಿದ್ದ ಸಿಜೆಪಿ, ಭಾರದ್ವಾಜ್‌ನ ಬಂಧನಕ್ಕೆ ಆಗ್ರಹಿಸುತ್ತಿದೆ ಮತ್ತು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸುತ್ತಿದೆ. 38 ವರ್ಷದ ಕುಮಾರ್ ಅವರಿಗೆ ಗಲಾಟೆಯ ವೇಳೆ ತಲೆಗೆ ಸಣ್ಣ ಗಾಯವಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ ನಂತರ ಮತ್ತು ಅವರ ತಲೆಬುರುಡೆ ಒಡೆದಿದೆ ಎಂಬ ಆರೋಪವನ್ನು ತಳ್ಳಿಹಾಕಿದ ನಂತರ ಗುರುವಾರ ಈ ವಿವಾದ ತೀವ್ರಗೊಂಡಿತು.

ಭಾರದ್ವಾಜ್ ಮತ್ತು ಮತ್ತೊಬ್ಬ ಆರೋಪಿ ಸೂರಜ್ ಕುಮಾರ್ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆದು, ವಿಚಾರಣೆ ನಡೆಸಿ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದಲ್ಲಿ ದೋಷಾರೋಪಣಾ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಲಾಗುವುದು ಎಂದೂ ಅವರು ಹೇಳಿದ್ದಾರೆ. ಶುಕ್ರವಾರ, ಸಿಜೆಪಿ ವಕ್ತಾರಾ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರ ಹಲವು ಬೆಂಬಲಿಗರು ಹಾಗೂ ಸಂಸದರಾದ ಚಂದ್ರಶೇಖರ್ ಆಜಾದ್, ಪಪ್ಪು ಯಾದವ್ ಭಾರದ್ವಾಜ್ ಸಂಸತ್ ರಸ್ತೆ ಪೊಲೀಸ್ ಠಾಣೆಗೆ ತೆರಳಿ, ಭಾರದ್ವಾಜ್ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಭಾರದ್ವಾಜ್‌ನನ್ನು 72 ಗಂಟೆಗಳೊಳಗೆ ಬಂಧಿಸುವುದಾಗಿ ಪೊಲೀಸರು ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ನಿಶು ಆಜಾದ್ ತಿಳಿಸಿದರು. "ಪೊಲೀಸರು ಸ್ವತಂತ್ರನನ್ನು 72 ಗಂಟೆಗಳಲ್ಲಿ ಬಂಧಿಸುವುದಾಗಿ ಹೇಳಿದ್ದಾರೆ. ಅವರು ಕ್ರಮ ಕೈಗೊಳ್ಳುತ್ತಾರೆ ಮತ್ತು ಈವರೆಗೆ ಮಾಡುತ್ತಿದ್ದಂತೆ ವಿಳಂಬ ಮಾಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ.

ಘಟನೆಯ ನಂತರ ನನಗೆ ಮೌಖಿಕ ನಿಂದನೆ ಮತ್ತು ಅತ್ಯಾಚಾರದ ಬೆದರಿಕೆಗಳನ್ನು ಒಡ್ಡಲಾಗಿದೆ ಎಂದು ಆರೋಪಿಸಿದ ನಿಶು, ಈ ಬೆದರಿಕೆಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿರುವುದಾಗಿ ತಿಳಿಸಿದರು. "ಹೊರಗೆ ಬರಲೂ ನನಗೆ ಮುಜುಗರವಾಗುತ್ತಿತ್ತು. ಕೆಲವು ವಾರಗಳ ಕಾಲ ನನಗೆ ಶಾಲೆಗೆ ಹೋಗಲು ಸಾಧ್ಯವಾಗಲಿಲ್ಲ, ಎಲ್ಲರೂ ನನ್ನನ್ನು ತಪ್ಪು ದೃಷ್ಟಿಯಿಂದ ನೋಡುತ್ತಿದ್ದಾರೆ ಎಂದು ನನಗೆ ಅನ್ನಿಸುತ್ತಿದೆ. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ," ಎಂದು ಅವರು ಹೇಳಿದರು.

AICC ಕಾನೂನು ವಿಭಾಗದೊಂದಿಗೆ ಗುರುತಿಸಿಕೊಂಡಿರುವ ರಿಷಬ್, ಕೊಲೆ ಯತ್ನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಎಫ್‌ಐಆರ್‌ನಲ್ಲಿ (FIR) ಸೇರಿಸುವಂತೆ ನಿಯೋಗವು ಒತ್ತಾಯಿಸಿದೆ ಎಂದು ಹೇಳಿದರು. "ಕೊಲೆ ಯತ್ನ, ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಕ್ರಿಮಿನಲ್ ಬೆದರಿಕೆಯಂತಹ ಪ್ರಮುಖ ಆರೋಪಗಳನ್ನು ಸೇರಿಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು. ಅವರು ಇದಕ್ಕೆ ಒಪ್ಪಿಕೊಂಡರು ಮತ್ತು 72 ಗಂಟೆಗಳ ಒಳಗೆ ಆತನನ್ನು ಬಂಧಿಸುವುದಾಗಿ ಭರವಸೆ ನೀಡಿದರು ಎಂದು ಅವರು ತಿಳಿಸಿದರು.

ನಿಶು ಅವರನ್ನು ಗುರಿಯಾಗಿಸಿಕೊಂಡು ನಡೆಸಲಾದ ಆನ್‌ಲೈನ್ ನಿಂದನೆ ಮತ್ತು ಆಕ್ಷೇಪಾರ್ಹ ಚಿತ್ರಗಳ ಕುರಿತು ಪ್ರತ್ಯೇಕ ಎಫ್‌ಐಆರ್ ದಾಖಲಿಸುವುದಾಗಿ ಪೊಲೀಸರು ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ರಿಷಬ್ ಹೇಳಿದರು.

ಸಂಜಯ್ ಕುಮಾರ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಕೊಲೆ ಯತ್ನ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳನ್ನು ಸೇರಿಸುವುದಾಗಿ ಹೆಚ್ಚುವರಿ ಡಿಸಿಪಿ (Additional DCP) ಭರವಸೆ ನೀಡಿದ್ದಾರೆ ಎಂದು ಸಿಜೆಪಿ (CJP) ಸಹ-ಸಂಯೋಜಕ ಸೌರವ್ ದಾಸ್ ಹೇಳಿದರು.

ವಿವಾದಕ್ಕೆ ಕಾರಣವಾದ ವಿಡಿಯೋದಲ್ಲಿ, ರಾಜಕೀಯ ಲಿಂಕ್ ನಿಂದ ನಾನು ಜೈಲು ಸೇರದಂತಾಯಿತು ಎಂದು ಭಾರದ್ವಾಜ್ ಹೇಳಿಕೊಂಡಿರುವುದು ಕಂಡುಬಂದಿದೆ. ಇದೇ ವೇಳೆ ಅವರು ದೆಹಲಿ ಸಚಿವ ಕಪಿಲ್ ಮಿಶ್ರಾ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. ಈ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ದಾಸ್ ಹಿರಿಯ ಬಿಜೆಪಿ ನಾಯಕರನ್ನು ಆಗ್ರಹಿಸಿದ್ದಾರೆ. "ಕಪಿಲ್ ಮಿಶ್ರಾ ಮತ್ತು ಚಿರಾಗ್ ಪಾಸ್ವಾನ್ ಅವರ ಕರೆಗಳ ಮೇರೆಗೆ ತನ್ನನ್ನು ಬಿಡುಗಡೆ ಮಾಡಲಾಯಿತು ಎಂದು ಆ ದುಷ್ಕರ್ಮಿ ಬಹಿರಂಗವಾಗಿ ಹೇಳುತ್ತಿರುವಾಗ, ಬಿಜೆಪಿ ಉನ್ನತ ನಾಯಕರು ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ದೆಹಲಿಯಲ್ಲಿ ಭಾರೀ ಹೈಡ್ರಾಮಾ; ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ, ಪೊಲೀಸ್ ಠಾಣೆಗೆ CJP ಮುತ್ತಿಗೆ

'Hanuman Ansh': ಸಿನಿಮಾ ವೀಕ್ಷಿಸಿದ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್! ಹೇಳಿದ್ದೇನು? Video

ಮಳೆ ಕೊರತೆ, ಬರದ ಆತಂಕ; ರಾಜ್ಯದಲ್ಲಿ 28.52 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆಗೆ ಸರ್ಕಾರ ಚಾಲನೆ