ದೆಹಲಿ ವಿಮಾನ ನಿಲ್ದಾಣ 
ದೇಶ

ದೆಹಲಿಯಲ್ಲಿ ಭಾರಿ ಮಳೆ: ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತ; ವಿಮಾನಗಳ ಮಾರ್ಗ ಬದಲಾವಣೆ; IMD ರೆಡ್ ಅಲರ್ಟ್ ಘೋಷಣೆ, Video

ಹಲವು ಗಂಟೆಗಳ ಮಳೆಯ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಜಲಾವೃತಗೊಂಡಿತು.

ನವದೆಹಲಿ: ರಾಷ್ಟ್ರ ರಾಜಧಾನಿಯ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತವಾಗಿದ್ದು, ಹಲವು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ತೀವ್ರ ಮಳೆ, ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಗಾಳಿಯ ಮುನ್ಸೂಚನೆಯೊಂದಿಗೆ 'ರೆಡ್ ಅಲರ್ಟ್' ಘೋಷಿಸಿದೆ. ಜನ್ಮಾಷ್ಟಮಿ ಆಚರಣೆಗಾಗಿ ಮನೆಯಿಂದ ಹೊರಬಂದ ಜನರು ಹಠಾತ್ ಮಳೆಗೆ ಸಿಲುಕಿಕೊಂಡರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ವಾಹನ ಸವಾರರು ತೀವ್ರ ಪರದಾಡುವಂತಾಯಿತು.

ಹಲವು ಗಂಟೆಗಳ ಮಳೆಯ ನಂತರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಜಲಾವೃತಗೊಂಡಿತು. ಪ್ರಯಾಣಿಕರು ಪಾದದ ಮಟ್ಟದ ನೀರಿನಲ್ಲಿ ಲಗೇಜ್ ಟ್ರಾಲಿಗಳನ್ನು ತಳ್ಳಿಕೊಂಡು ಹೋಗುತ್ತಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ.

ಭಾರಿ ಮಳೆಯಿಂದಾಗಿ ಮಧ್ಯಾಹ್ನ 3.30 ರಿಂದ 4.30 ರ ನಡುವೆ ಒಂಬತ್ತು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಇವುಗಳಲ್ಲಿ ನಾಲ್ಕು ಜೈಪುರಕ್ಕೆ, ನಾಲ್ಕು ಲಕ್ನೋಗೆ ಮತ್ತು ಒಂದು ಅಹಮದಾಬಾದ್‌ಗೆ ತೆರಳಬೇಕಾದ ವಿಮಾನಗಳು ಸೇರಿವೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ದೆಹಲಿಗೆ ಬರುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಏರ್ ಇಂಡಿಯಾ ಪ್ರಯಾಣಿಕರಿಗೆ ನೀಡಿದೆ. IMD ಪ್ರಕಾರ, ಪಾಲಂನಲ್ಲಿ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರ ನಡುವೆ 3.4 ಮಿ.ಮೀ ಮಳೆಯಾಗಿದ್ದರೆ, ನಜಫ್‌ಗಢದಲ್ಲಿ ಬೆಳಿಗ್ಗೆ 8.30 ರಿಂದ 11.30 ರ ನಡುವೆ 0.5 ಮಿ.ಮೀ ಮಳೆಯಾಗಿದೆ.

ಸಂಜೆ 5 ರಿಂದ ರಾತ್ರಿ 8 ರ ನಡುವೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಮತ್ತು ಸಿಡಿಲು ಹಾಗೂ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಂದಿನ ಮೂರು ಗಂಟೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ಕೆಲವು ಸ್ಥಳಗಳಲ್ಲಿ 50-100 ಮಿ.ಮೀ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಗುಡುಗು, ಸಿಡಿಲು ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ (ಗಂಟೆಗೆ 60 ಕಿ.ಮೀ ವರೆಗೆ ಏರಿಕೆಯಾಗಬಲ್ಲ) ಬಲವಾದ ಗಾಳಿ ಬೀಸಲಿದೆ ಎಂದು IMD ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board

ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್, ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!