ಆರ್‌ಜಿ ಕರ್ ಕಾಲೇಜು ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ Online Desk
ದೇಶ

RG Kar ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪಶ್ಚಿಮ ಬಂಗಾಳ ಮುನಿಸಿಪಾಲಿಟಿ ಅಧ್ಯಕ್ಷ ಬೆಂಗಳೂರಲ್ಲಿ ಅರೆಸ್ಟ್; ಬಯಲಾಯ್ತು ಸ್ಫೋಟಕ ಸತ್ಯ

RG Kar Rape-Murder Case: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ-ಕೊಲೆ ಪ್ರಕರಣದಲ್ಲಿ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಟಿಎಂಸಿ ನಾಯಕ ಸೋಮನಾಥ್ ಡೇ ಬೆಂಗಳೂರಿನಲ್ಲಿ ಬಂಧನ; ಸಾಕ್ಷ್ಯ ನಾಶಪಡಿಸಿದ ಸಂಚು ಪ್ರಕರಣದಲ್ಲಿ ಮೂರನೇ ಆರೋಪಿ ಆಗಿ ಸಿಲಿಕಾನ್ ಸಿಟಿಯಲ್ಲಿ ಸೆರೆ

ಬೆಂಗಳೂರು: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಹಾಗೂ ಪಶ್ಚಿಮ ಬಂಗಾಳದ ಪಾಣಿಹಟಿ ಪುರಸಭೆಯ ಮಾಜಿ ಅಧ್ಯಕ್ಷ ಸೋಮನಾಥ್ ಡೇ ಅವರನ್ನು ಪಶ್ಚಿಮ ಬಂಗಾಳದ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರಲ್ಲಿ ಸೆರೆ

2024 ರಲ್ಲಿ ನಡೆದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ, ಮೃತದೇಹದ ಎರಡನೇ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಬಾರದು ಎಂಬ ಉದ್ದೇಶದಿಂದ ತರಾತುರಿಯಲ್ಲಿ ಸಾಕ್ಷ್ಯ ನಾಶಪಡಿಸಲು ಹಾಗೂ ನಿಯಮಗಳನ್ನು ಮೀರಿ ತರಾತುರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಿದ ಸಂಚಿನಲ್ಲಿ ಸೋಮನಾಥ್ ಡೇ ಭಾಗಿಯಾಗಿದ್ದರು ಎಂಬ ಗಂಭೀರ ಆರೋಪವಿದೆ. ಮೃತರ ಕುಟುಂಬದವರ ದೂರಿನ ಮೇರೆಗೆ ಇವರ ವಿರುದ್ಧ ಹೊಸ ಎಫ್‌ಐಆರ್ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಇವರು ಮೊದಲು ಹೈದರಾಬಾದ್‌ಗೆ ಓಡಿಹೋಗಿದ್ದರು. ಪೊಲೀಸರು ಬೆನ್ನಟ್ಟುತ್ತಿದ್ದಂತೆ ಅಲ್ಲಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಪಶ್ಚಿಮ ಬಂಗಾಳದ ಖಾರ್ಡಾ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿ ಇವರನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆದಿದೆ.

ಮೂರನೇ ಬಂಧನ

ಮುಂದುವರೆದು, ಈ ಅಂತಿಮ ಸಂಸ್ಕಾರದ ವಿವಾದಕ್ಕೆ ಸಂಬಂಧಿಸಿದಂತೆ ಇದು ಮೂರನೇ ಬಂಧನವಾಗಿದೆ. ಇದಕ್ಕೂ ಮುನ್ನ ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಮತ್ತು ಸ್ಥಳೀಯ ಕೌನ್ಸಿಲರ್ ಸಂಜೀವ್ ಮುಖರ್ಜಿ ಎಂಬುವವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!