ಅಯ್ಯಾಕಣ್ಣು  
ದೇಶ

ಕರ್ನಾಟಕ 1 ಲಕ್ಷ ಕೋಟಿ ರೂ. ಪರಿಹಾರ ನೀಡಬೇಕು: ತಮಿಳುನಾಡು ರೈತ ಮುಖಂಡ

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ತಮಿಳುನಾಡು ಸರ್ಕಾರ ತನ್ನ ರೈತರಿಗೆ ಅಗತ್ಯ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದ ಮತ್ತಷ್ಟು ತೀವ್ರಗೊಂಡಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ನೀರು ಬಿಡುಗಡೆ ಮಾಡದೆ ಕರ್ನಾಟಕವು ಆದೇಶ ಉಲ್ಲಂಘಿಸಿದೆ ಎಂದು ಆರೋಪಿಸಿರುವ ದಕ್ಷಿಣ ಭಾರತ ನದಿಗಳ ಜೋಡಣೆ ರೈತ ಸಂಘದ ಅಧ್ಯಕ್ಷ ಪಿ. ಅಯ್ಯಾಕಣ್ಣು, ಕರ್ನಾಟಕದಿಂದ 1 ಲಕ್ಷ ಕೋಟಿ ರೂ. ಪರಿಹಾರ ಪಡೆಯಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಯ್ಯಾಕಣ್ಣು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ತಮಿಳುನಾಡು ಸರ್ಕಾರ ತನ್ನ ರೈತರಿಗೆ ಅಗತ್ಯ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕರ್ನಾಟಕವು ಪ್ರಸ್ತುತ ಅಗತ್ಯವಿರುವ ಕನಿಷ್ಠ 18,000 ಕ್ಯೂಸೆಕ್‌ ಬದಲಿಗೆ ಕೇವಲ 7,000 ಕ್ಯೂಸೆಕ್‌ ನೀರನ್ನು ಮಾತ್ರ ಬಿಡುಗಡೆ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಸಂಪರ್ಕಿಸಿದಾಗ ಜಲಸಂಪನ್ಮೂಲ ಸಚಿವ ಎನ್.ಎಸ್. ಚಲುವರಾಯಸ್ವಾಮಿ ಪ್ರತಿಕ್ರಿಯಿಸಲು ನಿರಾಕರಿಸಿದರು.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಈ ಹೇಳಿಕೆಗೆ ಪ್ರತಿಕ್ರಿಯಿಸಲು ನಾನು ಬಯಸುವುದಿಲ್ಲ ಎಂದರು. ತಮಿಳುನಾಡು ರೈತ ಮುಖಂಡರ ಈ ಹೇಳಿಕೆಗೆ ಕರ್ನಾಟಕದ ರೈತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ಭಾಗದಲ್ಲಿ ಬೆಳೆಗಳಿಗೆ ನೀರಿನ ಲಭ್ಯತೆಯೇ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಕರ್ನಾಟಕ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

ಭಾಗಮಂಡಲದಿಂದ ಸಮುದ್ರ ತೀರದವರೆಗೆ ಕಾವೇರಿ ಜಲಾನಯನ ಪ್ರದೇಶವನ್ನು ತಾವು ವೈಯಕ್ತಿಕವಾಗಿ ಅಧ್ಯಯನ ಮಾಡಿರುವುದಾಗಿ ಹೇಳಿದ ಚಂದ್ರಶೇಖರ್, ಕರ್ನಾಟಕದ 120ಕ್ಕೂ ಹೆಚ್ಚು ತಾಲೂಕುಗಳು ಬರದಿಂದ ತತ್ತರಿಸುತ್ತಿರುವಾಗ ಇಂತಹ ಬೇಡಿಕೆಗಳನ್ನು ಹೇಗೆ ಮುಂದಿಡಲು ಸಾಧ್ಯ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್