ಕಾವೇರಿ ಜಲ  
ದೇಶ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ

ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ನವದೆಹಲಿ: ಕಾವೇರಿ ಜಲ ನಿಯಂತ್ರಣ ಸಮಿತಿಯು (CWRC) ಇಂದು ಮಂಗಳವಾರ, ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿದೆ.

ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ನಾಳೆ ಬೆಳಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ 6,000 ಕ್ಯೂಸೆಕ್ ನೀರಿನ ಹರಿವು ಖಚಿತವಾಗುವಂತೆ ಕರ್ನಾಟಕ ತನ್ನ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸಿದೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೈಗೊಂಡ ನಿರ್ಧಾರವನ್ನು ಅನುಮೋದಿಸಿ, ಆಗಸ್ಟ್ 25ರಿಂದ ಇಂದಿನವರೆಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಿತ್ತು.

ಆದರೆ, ಸೆಪ್ಟೆಂಬರ್ 4ರಂದು ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಿ, ನೀರು ಬಿಡುಗಡೆ ಪ್ರಮಾಣವನ್ನು 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ಇಳಿಸುವಂತೆ ಕೋರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!

Ramayana: 100 ಕೋಟಿ ಸಂಭಾವನೆ ತಿರಸ್ಕರಿಸಿದ ಯಶ್; 'ರಾಮಾಯಣ'ದ ದಕ್ಷಿಣ ಭಾರತ ವಿತರಕ ಹಕ್ಕು ಪಡೆದ ರಾಕಿಂಗ್ ಸ್ಟಾರ್!

ರೀಲ್ಸ್ ಹುಚ್ಚಾಟ; ವಿಡಿಯೋ ಮಾಡುವ ವೇಳೆ 40 ಅಡಿ ಕೆಳಗೆ ಬಿದ್ದ ಯುವಕ; 2 ರಿಕ್ಷಾಗಳು ಜಖಂ, ಯುವಕ ಪಾರು, Video

'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!