ಅಮೃತಾ ಫಡ್ನವಿಸ್ 
ದೇಶ

'ಟ್ರೋಲ್ ಕಟೆಂಟ್ ಆಗಿ ಬಳಕೆ'..!; ‘ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Video

ಗರ್ಬಾ ಮತ್ತು ಇತರೆ ಹಿಂದೂ ಹಬ್ಬಗಳ ಆಚರಣೆಗಳಲ್ಲಿ ಮುಸ್ಲಿಮರು ಪಾಲ್ಗೊಳ್ಳುವ ಕುರಿತು ತಾವು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅಮೃತಾ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ.

ಮುಂಬೈ: ಗರ್ಬಾ ಹಾಗೂ ನವರಾತ್ರಿ ನಮ್ಮ ಸುಂದರ ಹಬ್ಬಗಳಾಗಿದ್ದು, ಇವುಗಳಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ಇರಬಾರದು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಹೇಳಿದ್ದಾರೆ.

ಗರ್ಬಾ ಮತ್ತು ಇತರೆ ಹಿಂದೂ ಹಬ್ಬಗಳ ಆಚರಣೆಗಳಲ್ಲಿ ಮುಸ್ಲಿಮರು ಪಾಲ್ಗೊಳ್ಳುವ ಕುರಿತು ತಾವು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಅಮೃತಾ ಫಡ್ನವಿಸ್, ತಮ್ಮ ಹೇಳಿಕೆಯನ್ನು ಮಾಧ್ಯಮಗಳೇ ಅನಗತ್ಯವಾಗಿ ವಿವಾದ ಮಾಡುತ್ತಿವೆ ಎಂದು ಪರೋಕ್ಷ ಕಿಡಿಕಾರಿದರು.

ತಮ್ಮ ಹೇಳಿಕೆಯನ್ನು ಟ್ರೋಲ್ ಕಟೆಂಟ್ ಆಗಿ ಬಳಕೆ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಓರ್ವ ಸಾಮಾಜಿಕ ಕಾರ್ಯಕರ್ತೆಯಾಗಿ, ಸಮಾಜದ ಜವಾಬ್ದಾರಿಯುತ ನಾಗರೀಕಳಾಗಿ ನಾನು ಹೇಳಿಕೆ ನೀಡಿದ್ದೆ ಎಂದಿದ್ದಾರೆ.

ಅಂತೆಯೇ ‘ಗರ್ಬಾ ಮತ್ತು ನವರಾತ್ರಿ ನಮ್ಮ ಸುಂದರ ಹಬ್ಬಗಳು. ಜಗತ್ತಿನಾದ್ಯಂತ ನಮ್ಮ ಈ ಹಬ್ಬಗಳನ್ನು ಇಷ್ಟಪಡುತ್ತಾರೆ. ಇಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ಭೇದಭಾವ ಇರಬಾರದು. ಭಕ್ತಿ ಮತ್ತು ಗೌರವದಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಯಸುವ ಯಾರನ್ನಾದರೂ ಸ್ವಾಗತಿಸಬೇಕು’ ಎಂದು ಅಮೃತಾ ಫಡ್ನವೀಸ್ ಹೇಳಿದ್ದಾರೆ.

ಅಲ್ಲದೆ ನಮ್ಮ ಧರ್ಮವನ್ನು ಪ್ರಚಾರ ಮಾಡಲು ನಮ್ಮ ಜಗತ್ತಿಗೆ ಮುಕ್ತವಾಗಿಡಬೇಕು. ಇಂತಹ ಸುಂದರ ಕಾರ್ಯಕ್ರಮಗಳೇ ನಮ್ಮ ಧರ್ಮವನ್ನು ಪ್ರಪಂಚಕ್ಕೆ ಪರಿಚಯಿಸುತ್ತವೆ. ಹಬ್ಬಗಳು ಜನರನ್ನು ಒಗ್ಗೂಡಿಸುವ ವೇದಿಕೆಗಳಾಗಬೇಕು ಹಾಗೂ ಭಕ್ತಿ ಮತ್ತು ಗೌರವದಿಂದ ಭಾಗವಹಿಸುವವರಿಗೆ ಧರ್ಮದ ಆಧಾರದ ಮೇಲೆ ನಿರ್ಬಂಧ ವಿಧಿಸಬಾರದು ಎಂದು ಅವರು ಹೇಳಿದರು.

ಆ ಮೂಲಕ ಮುಸ್ಲಿಮರು ನವರಾತ್ರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಯಸಿದರೆ ಅದಕ್ಕೆ ಯಾವುದೇ ಆಕ್ಷೇಪ ಇರಬಾರದು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಅವರು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!