ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ 
ದೇಶ

ಮಹಾ ದುರಂತ: ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 9 ಮಂದಿ ಸಾವು

ಪಿಂಪಲ್‌ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಪಿಂಪಲ್‌ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟರೆ, ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ ಒಂಬತ್ತಕ್ಕೇರಿದೆ.

ಅಪಘಾತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಕೋಲಿ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ಅಪಘಾತಕ್ಕೂ ಕೆಲ ಕ್ಷಣಗಳ ಮೊದಲು ಬೊಲೆರೊ ವಾಹನ ಚಲಿಸುತ್ತಿದ್ದ ದೃಶ್ಯಗಳು ಹೆದ್ದಾರಿಯ ಸಮೀಪವಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಡಿಕ್ಕಿ ಸಂಭವಿಸುವ ಸ್ವಲ್ಪ ಸಮಯದ ಮೊದಲು ಬೊಲೆರೊ ಅತಿ ವೇಗವಾಗಿ ಚಲಿಸುತ್ತಿರುವುದು ಕಂಡು ಬಂದಿದೆ.

ಅಪಘಾತಕ್ಕೆ ಕಾರಣವಾದ ಘಟನಾವಳಿಗಳ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೊಲೆರೊ ವಾಹನ ಅತಿ ವೇಗದಲ್ಲಿ ಚಲಿಸುತ್ತಿದ್ದಿರಬಹುದು ಮತ್ತು ಟ್ರಕ್‌ಗೆ ಡಿಕ್ಕಿ ಹೊಡೆಯುವ ಮೊದಲು ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಪೊಲೀಸ್ ತನಿಖೆಯ ನಂತರವೇ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್‌ಗೆ 5 ಗಂಟೆಗಳ ಪೆರೋಲ್‌: ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!

ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತದ ನ್ಯೂಕ್ಲಿಯರ್ ಬಲ: ಇಂಡಿಯಾದ ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು; ಯಾವ ದೇಶದಲ್ಲಿ ಎಷ್ಟು ಅಣ್ವಸ್ತ್ರ?