ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ದರೋಡೆ AI Image
ದೇಶ

ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು

ಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ನಾಗ್ಪುರದ ಸಕ್ಕರದರಾ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಬಂಧಿತ ಆರೋಪಿಯನ್ನು ಸೂರಜ್ ಬೋಜ್‌ರಾಜ್ ಬೋರ್ಕರ್ ಎಂದು ಗುರುತಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ನಾಗ್ಪುರದ ಸಕ್ಕರದರಾ ವ್ಯಾಪ್ತಿಯ ಭಾಂಡೆ ಪ್ಲಾಟ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಸಾಯಂಕಾಲ, ಬ್ಯಾಂಕ್ ಸಿಬ್ಬಂದಿ ಎಟಿಎಂನಿಂದ ನಗದು ಸಂಗ್ರಹಿಸಿ ತಂದು ಕ್ಯಾಶ್ ಕೌಂಟರ್‌ನಲ್ಲಿ ಇಡುತ್ತಿದ್ದಾಗ, ಗ್ರಾಹಕನ ಸೋಗಿನಲ್ಲಿ ಮುಖ ಮುಚ್ಚಿಕೊಂಡು ಬಂದಿದ್ದ ಆರೋಪಿಯು ಹಠಾತ್ತನೆ ಸುಮಾರು ಅರ್ಧ ಕೆಜಿಯಷ್ಟು ತಂದಿದ್ದ ಖಾರದ ಪುಡಿಯನ್ನು ಸಿಬ್ಬಂದಿಯ ಕಣ್ಣಿಗೆ ಎರಚಿದ್ದಾನೆ.  ಕಣ್ಣು ಉರಿಯಿಂದ ಸಿಬ್ಬಂದಿ ಚೀರಾಡುತ್ತಿದ್ದಂತೆ ಕೌಂಟರ್ ಮೇಲಿದ್ದ ₹4.53 ಲಕ್ಷ ಹಣದ ಬ್ಯಾಗ್ ಅನ್ನು ಎಗರಿಸಿ ಆರೋಪಿ ಸೂರಜ್ ಬೋಜ್‌ರಾಜ್ ಬೋರ್ಕರ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಮುಂದುವರೆದು, ಕಳ್ಳತನ ನಡೆದ ತಕ್ಷಣ ಬ್ಯಾಂಕ್ ಸಿಬ್ಬಂದಿ ಜೋರಾಗಿ ಕೂಗಾಡಿ ಆತನನ್ನು ಬೆನ್ನಟ್ಟಿದ್ದಾರೆ. ಇದೇ ವೇಳೆ ಸುತ್ತಮುತ್ತ ಗಸ್ತಿನಲ್ಲಿದ್ದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೇವಲ 30 ನಿಮಿಷಗಳಲ್ಲಿ, ಬ್ಯಾಂಕ್‌ನಿಂದ ಕೇವಲ 1 ಕಿಲೋಮೀಟರ್ ದೂರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಏತನ್ಮಧ್ಯೆ, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಂಧಿತ ಸೂರಜ್ ಬೋರ್ಕರ್ ಷೇರು ಮಾರುಕಟ್ಟೆಯಲ್ಲಿ (Stock Market) ಭಾರಿ ಹಣ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ಎಂದು ತಿಳಿದುಬಂದಿದೆ. ಸಾಲ ತೀರಿಸಲು ಮತ್ತು ಸುಲಭವಾಗಿ ಹಣ ಗಳಿಸುವ ದುರಾಸೆಯಿಂದ ಈ ಕೃತ್ಯ ಎಸಗಿದ್ದಾನೆ.

ಆರೋಪಿಯ ಹಿನ್ನೆಲೆ ಏನು?

ಬಂಧಿತ ಆರೋಪಿಯನ್ನು 28 ವರ್ಷದ ಸೂರಜ್ ಭೋಜರಾಜ್ ಬೋರ್ಕರ್ ಎಂದು ಗುರುತಿಸಲಾಗಿದೆ. ಈತ ಬಿಎಸ್‌ಸಿ ಪದವೀಧರನಾಗಿದ್ದು, ಸದ್ಯ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದ ಹಾಗೂ ಶೇರ್ ಮಾರ್ಕೆಟ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದರಿಂದ ಈ ದರೋಡೆಗೆ ಸ್ಕೆಚ್ ಹಾಕಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಇಡೀ ದರೋಡೆಯ ದೃಶ್ಯಾವಳಿಗಳು ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ ಭೀತಿ: ಏಕಾಏಕಿ ವಾಲಿದ ನಾಲ್ಕಂತಸ್ತಿನ ಕಟ್ಟಡ, ನೆಲಸಮಗೊಳಿಸಲು MCD ಸೂಚನೆ

ಆಪರೇಷನ್‌ ನಡೆಯುತ್ತಿದ್ದಾಗಲೇ ವಿದ್ಯುತ್‌ ಕಡಿತ; ಮೊಬೈಲ್‌ ಟಾರ್ಚ್‌ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video