ಆದಿತ್ಯ ಠಾಕ್ರೆ, ದಿಶಾ ಸಾಲಿಯಾನ್ 
ದೇಶ

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI!

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್‌ಐಆರ್ (FIR) ದಾಖಲಿಸಿದೆ.

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್‌ಐಆರ್ (FIR) ದಾಖಲಿಸಿದೆ.

ಈ ಪ್ರಕರಣವನ್ನು ದಾಖಲಿಸಿಕೊಂಡು, ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವುದು ಸೇರಿದಂತೆ ತನಿಖೆಯನ್ನು ಪ್ರಾರಂಭಿಸಿರುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ಆರು ವರ್ಷಗಳಿಂದ ತನಿಖೆ ನಡೆಯುತ್ತಿದ್ದರೂ ಎಫ್‌ಐಆರ್ ದಾಖಲಿಸಲು ವಿಫಲವಾದ ಮುಂಬೈ ಪೊಲೀಸರನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಸೆಪ್ಟೆಂಬರ್ 2 ರಂದು ನ್ಯಾಯಮೂರ್ತಿಗಳಾದ ಸಾರಂಗ್ ಕೋಟ್ವಾಲ್ ಮತ್ತು ರಣಜಿತ್‌ಸಿನ್ಹ ರಾಜಾ ಭೋಸ್ಲೆ ಅವರಿದ್ದ ವಿಭಾಗೀಯ ಪೀಠವು, ಸಾಲಿಯಾನ್ ಅವರ ಸಾವಿಗೆ ಸಂಬಂಧಿಸಿದ ಸನ್ನಿವೇಶಗಳ ಕುರಿತು ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದ ನ್ಯಾಯಾಲಯವು, ಸಲಿಯನ್ ಅವರ ತಂದೆ ಸತೀಶ್ ಸಲಿಯನ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಸಿಬಿಐಗೆ ಸೂಚಿಸಿತು. ಪೊಲೀಸ್ ತನಿಖೆಯು "ಉತ್ತರಗಳಿಗಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ" ಎಂದು ಹೇಳಿದ ನ್ಯಾಯಾಲಯವು, ಪ್ರಕರಣವನ್ನು ನಿರ್ವಹಿಸಿದ ರೀತಿಯಲ್ಲಿ "ಸ್ಪಷ್ಟ ವೈರುಧ್ಯಗಳಿವೆ" ಎಂದು ಅಭಿಪ್ರಾಯಪಟ್ಟಿತು. ಯಾವುದೇ ನಿರ್ಣಾಯಕ ತೀರ್ಮಾನಕ್ಕೆ ಬಾರದೆ ತನಿಖೆಯನ್ನು "ಅತಿಯಾದ ದೀರ್ಘಾವಧಿಯವರೆಗೆ" ಮುಂದುವರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಆದಾಗ್ಯೂ, ಎಫ್‌ಐಆರ್ (FIR) ದಾಖಲಿಸುವುದನ್ನು ಯಾವುದೇ ವ್ಯಕ್ತಿಯ ವಿರುದ್ಧದ ಅಪರಾಧ ಸಾಬೀತಾಗಿದೆ ಎಂದು ಪರಿಗಣಿಸಬಾರದು ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು. ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳ ಆಧಾರದ ಮೇಲೆ, ತನಿಖಾಧಿಕಾರಿಯ ಅಭಿಪ್ರಾಯದಲ್ಲಿ ಒಬ್ಬ ವ್ಯಕ್ತಿಯ ವಿರುದ್ಧ ಸಮಂಜಸವಾದ ಅನುಮಾನವನ್ನು ಹುಟ್ಟುಹಾಕಲು ಸಾಕಷ್ಟು ಆಧಾರಗಳಿದ್ದ ಹೊರತು, ಅವರನ್ನು ಆರೋಪಿ ಎಂದು ಪರಿಗಣಿಸುವಂತಿಲ್ಲ" ಎಂದು ನ್ಯಾಯಾಲಯ ಹೇಳಿದೆ.

ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ನಟ ಸೂರಜ್ ಪಂಚೋಲಿ, ನಟ-ನಿರ್ಮಾಪಕ ಡಿನೋ ಮೋರಿಯಾ ಮತ್ತು ಹಲವಾರು ಅಂಗರಕ್ಷಕರ ಹೆಸರುಗಳನ್ನು ಪಟ್ಟಿಯಲ್ಲಿ ನೀಡಿರುವುದಾಗಿ ದಿಶಾ ಅವರ ತಂದೆ ತಿಳಿಸಿದ್ದಾರೆ. ಸೆಲೆಬ್ರಿಟಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ದಿಶಾ ಸಾಲಿಯನ್ ಜೂನ್ 2020 ರಲ್ಲಿ ಮುಂಬೈನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಅವರ ಸಾವು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸ್ವಲ್ಪ ಮೊದಲು ಸಂಭವಿಸಿತ್ತು. ಇದು ಊಹಾಪೋಹಗಳಿಗೆ ಕಾರಣವಾಯಿತು. ಎರಡೂ ಪ್ರಕರಣಗಳ ಸುತ್ತಲಿನ ಸಂದರ್ಭಗಳ ಬಗ್ಗೆ ವಿವರವಾದ ತನಿಖೆಗೆ ಒತ್ತಡ ಹೆಚ್ಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಂದಿನ ದಿನಗಳಲ್ಲಿ ರಾಜ್ಯ ತೀವ್ರ ಬರಗಾಲ, ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

BBK 13: ನಿನ್ನನ್ನು ಎತ್ತಿ ಕುಕ್ಕಿ ಬಿಡ್ತೀನಿ.. ಸೌಂದರ್ಯಗೆ ಮಂಜು ಆವಾಜ್; 'Biggboss' ಮನೆಯಲ್ಲಿ ಕೈ ಮೀರಿದ ಪರಿಸ್ಥಿತಿ!

ಬಿಜೆಪಿ ಆಗ್ರಹಿಸಿದಂತೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ

'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್, Video

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!