ಸಾಂದರ್ಭಿಕ ಚಿತ್ರ 
ದೇಶ

ಗಣೇಶ ಪೆಂಡಾಲ್ ಬಳಿ ಮಾಂಸಾಹಾರ ಪತ್ತೆ! ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮದನ್ನಪೇಟೆ ಪ್ರದೇಶದ ವಸತಿ ಸಮುಚ್ಚಯವೊಂದರ ಬಳಿ ನಡೆಯುತ್ತಿದ್ದ ಅನ್ನ ಸಂತರ್ಪಣೆ ಸ್ಥಳದ ಹೊರಗೆ ಮೂಳೆಗಳು ಮತ್ತು ಆಹಾರ ತ್ಯಾಜ್ಯವಿದ್ದ ಪೊಟ್ಟಣವೊಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌: ಗಣೇಶ ಪೆಂಡಾಲ್ ಬಳಿ ಮಾಂಸಾಹಾರ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ಭಾನುವಾರ ನಡೆದಿದೆ. 'ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದಾಗ, ಅಡುಗೆ ಪಾತ್ರೆಯ ಬಳಿ ಮಾಂಸಾಹಾರದ ಪೊಟ್ಟಣವನ್ನು ಎಸೆಯಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ.

ಆದರೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಮದನ್ನಪೇಟೆ ಪ್ರದೇಶದ ವಸತಿ ಸಮುಚ್ಚಯವೊಂದರ ಬಳಿ ನಡೆಯುತ್ತಿದ್ದ ಅನ್ನ ಸಂತರ್ಪಣೆ ಸ್ಥಳದ ಹೊರಗೆ ಮೂಳೆಗಳು ಮತ್ತು ಆಹಾರ ತ್ಯಾಜ್ಯವಿದ್ದ ಪೊಟ್ಟಣವೊಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ವಸತಿ ಸಮುಚ್ಚಯದ ಮೂವರು ನಿವಾಸಿಗಳು ಈ ಪೊಟ್ಟಣವನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ಬೆನ್ನಲ್ಲೇ ಕೆಲವು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಗಣೇಶ ಪಂಡಾಲ್ ಆಯೋಜಕ ಸಮಿತಿಯ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದರು.

ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ. ವದಂತಿಗಳನ್ನು ಹರಡದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!