ಫೋಟೊ ಗ್ಯಾಲರಿ

Air India Plane Crash: ಮಾಜಿ ಸಿಎಂ ವಿಜಯ್ ರೂಪಾಣಿ ಕೊನೆ ಕ್ಷಣ; ಪತನದಲ್ಲಿ 241 ಮಂದಿ ಸಾವು; Photos!

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನ ಬಿಜೆ ವೈದ್ಯಕೀಯ ಕಾಲೇಜು ವೈದ್ಯರ ಕ್ವಾರ್ಟರ್ಸ್ ಗೆ ಡಿಕ್ಕಿ ಹೊಡೆದಿದ್ದು, ಆವರಣದಲ್ಲಿನ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ.

ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದೆ.

ಅಹಮದಾಬಾದ್​ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡಿದೆ. ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ.

ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು.

ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಣಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಬಂದಿವೆ. ಪೊಲೀಸರು ಆ ಪ್ರದೇಶದಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದು ಪ್ರಯಾಣಿಕರೋ ಅಥವಾ ಸರಕು ವಿಮಾನವೋ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಏರ್ ಇಂಡಿಯಾ ವಿಮಾನ ಪತನ

ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಣಿ ಸಹ ಪ್ರಯಾಣಿಸುತ್ತಿದ್ದು ಪ್ರಯಾಣಿಕರೊಬ್ಬರು ರೂಪಾಣಿ ಅವರ ಫೋಟೋವನ್ನು ತೆಗೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೀಷ್ ಮಹಲ್ 2.0: ದೆಹಲಿ ಬಳಿಕ ಪಂಜಾಬ್ ನಲ್ಲೂ ಆಮ್ ಆದ್ಮಿ ಕೇಜ್ರಿವಾಲ್ ಐಷಾರಾಮಿ ಬಂಗಲೆ; ಸರ್ಕಾರಿ ಸಂಪನ್ಮೂಲ ಬಳಕೆ ಆರೋಪ!

ನ.21 ಕ್ಕೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಸ್ವೀಕಾರ: ವರದಿಗಾರರ ಪ್ರಶ್ನೆಗೆ 'ಸಿಡಿಮಿಡಿ'ಗೊಂಡ ಸಿಎಂ ಸಿದ್ದರಾಮಯ್ಯ!

'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಬೇಡಿಕೆ ಪರಿಗಣನೆ: ಸಿಎಂ ಸಿದ್ದರಾಮಯ್ಯ

ಮಹಿಳೆಯರ ಮೇಲೆ ದೌರ್ಜನ್ಯ: 'ಕಿಲ್ಲರ್ ಕಾಂಗ್ರೆಸ್' ಪೋಸ್ಟರ್ ಅಭಿಯಾನ ಪ್ರಾರಂಭಿಸಿದ ಬಿಜೆಪಿ!

SCROLL FOR NEXT