ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 
ಸಿನಿಮಾ

ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಕುಟುಂಬ ಸದಸ್ಯರ ನಡುವೆ ನಿಖಿಲ್ ಕುಮಾರ ಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವ ನಡೆಯಿತು.
ಮದುವೆಗೆಂದೇ ಮನೆಯ ಮುಂಭಾಗ ವಿಶೇಷವಾಗಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್ ಕುಮಾರ ಸ್ವಾಮಿ ರೇವತಿ ಅವರಿಗೆ ತಾಳಿಕಟ್ಟುವ ಮೂಲಕ ಅವರನ್ನು ಬಾಳಸಂಗಾತಿಯಾಗಿ ವರಿಸಿದರು.
ಕುಮಾರಸ್ವಾಮಿ ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ‌ ಕಾರ್ಯ ನಡೆಸಿಕೊಟ್ಟರು.
ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ದರು. ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಸಹ ಪಾಲ್ಗೊಂಡರು.
ರಾಜ್ಯದಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿಖಿಲ್ ಮದುವೆಗೆ ಪೊಲೀಸರು ಷರತ್ತು ಬದ್ಧ ಅನುಮತಿ ನೀಡಿದ್ದರು, ಮದುವೆ ಕಾರ್ಯಕ್ರಮದಲ್ಲಿ ಒಟ್ಟು 42 ವಾಹನಗಳ ಓಡಾಟಕ್ಕೆ ಪೊಲೀಸರು ಅನುಮತಿ ನೀಡಿದ್ದರು.
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT