ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 
ಸಿನಿಮಾ

ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ. 

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಕುಟುಂಬ ಸದಸ್ಯರ ನಡುವೆ ನಿಖಿಲ್ ಕುಮಾರ ಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವ ನಡೆಯಿತು.
ಮದುವೆಗೆಂದೇ ಮನೆಯ ಮುಂಭಾಗ ವಿಶೇಷವಾಗಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್ ಕುಮಾರ ಸ್ವಾಮಿ ರೇವತಿ ಅವರಿಗೆ ತಾಳಿಕಟ್ಟುವ ಮೂಲಕ ಅವರನ್ನು ಬಾಳಸಂಗಾತಿಯಾಗಿ ವರಿಸಿದರು.
ಕುಮಾರಸ್ವಾಮಿ ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ‌ ಕಾರ್ಯ ನಡೆಸಿಕೊಟ್ಟರು.
ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ದರು. ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಸಹ ಪಾಲ್ಗೊಂಡರು.
ರಾಜ್ಯದಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿಖಿಲ್ ಮದುವೆಗೆ ಪೊಲೀಸರು ಷರತ್ತು ಬದ್ಧ ಅನುಮತಿ ನೀಡಿದ್ದರು, ಮದುವೆ ಕಾರ್ಯಕ್ರಮದಲ್ಲಿ ಒಟ್ಟು 42 ವಾಹನಗಳ ಓಡಾಟಕ್ಕೆ ಪೊಲೀಸರು ಅನುಮತಿ ನೀಡಿದ್ದರು.
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು
ನಿಖಿಲ್-ರೇವತಿ ಮದುವೆ ಫೋಟೋಗಳು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT