ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿ ಹಿಂಸಾಚಾರ ತಾರಕಕ್ಕೇರಿದೆ. ಅಲ್ಲದೆ ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಫ್ಘಾನ್ ನಾಗರೀಕರು ದೇಶ ತೊರೆಯಲು ಮುಂದಾಗಿದ್ದಾರೆ. 
ಸಿನಿಮಾ

ಭಾರತದಲ್ಲಿ 'ಹಿಂದೂ ಭಯೋತ್ಪಾದನೆ' ಇದೆ ಎಂದಿದ್ದವರಿಗೆ ಚಳಿ ಬಿಡಿಸಿದ ನಟಿ ಪ್ರಣಿತಾ, ಭೇಷ್ ಎಂದ ಅಭಿಮಾನಿಗಳು!

ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿ ಹಿಂಸಾಚಾರ ತಾರಕಕ್ಕೇರಿದೆ. ಅಲ್ಲದೆ ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಫ್ಘಾನ್ ನಾಗರೀಕರು ದೇಶ ತೊರೆಯಲು ಮುಂದಾಗಿದ್ದಾರೆ.

ಇದೇ ವೇಳೆ ತಾಲಿಬಾನಿ ಭಯೋತ್ಪಾದನೆ ವಿಚಾರ ಭಾರತದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಹಿಂದೂ ಉಗ್ರರು ಎನ್ನುವ ವಿಚಾರ ಮುನ್ನಲೆಗೆ ಬಂದಿದೆ.
ಭಾರತದಲ್ಲಿ ಆರ್ ಎಸ್ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಭಾರತದಲ್ಲಿ ಹಿಂದೂ ಭಯೋತ್ಪಾದನೆ ಇದೆ ಎಂಬ ಅನೇಕ ಟ್ವೀಟ್ ಗಳು ಮಾಡಲಾಗುತ್ತಿದೆ.
ಇದಕ್ಕೆ ನಟಿ ಪ್ರಣಿತಾ ಸುಭಾಷ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಭಯೋತ್ಪಾದನೆ ಪದ ಬಳಸುತ್ತಿದ್ದಾರೆ.
ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ. ಅವರು ನಿಮ್ಮ ಸುತ್ತಲ್ಲೂ ಇದ್ದಾರೆ ಎಂದು ಟ್ವೀಟಿಸಿದ್ದಾರೆ.
ಪ್ರಣಿತಾರ ಟ್ವೀಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೀವು ನಿಜಕ್ಕೂ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಣಿತಾ ಸುಭಾಷ್
ಪ್ರಣಿತಾ ಸುಭಾಷ್
ಪ್ರಣಿತಾ ಸುಭಾಷ್
ಪ್ರಣಿತಾ ಸುಭಾಷ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT