ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿ ಹಿಂಸಾಚಾರ ತಾರಕಕ್ಕೇರಿದೆ. ಅಲ್ಲದೆ ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಫ್ಘಾನ್ ನಾಗರೀಕರು ದೇಶ ತೊರೆಯಲು ಮುಂದಾಗಿದ್ದಾರೆ.
ಇದೇ ವೇಳೆ ತಾಲಿಬಾನಿ ಭಯೋತ್ಪಾದನೆ ವಿಚಾರ ಭಾರತದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಹಿಂದೂ ಉಗ್ರರು ಎನ್ನುವ ವಿಚಾರ ಮುನ್ನಲೆಗೆ ಬಂದಿದೆ.ಭಾರತದಲ್ಲಿ ಆರ್ ಎಸ್ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಭಾರತದಲ್ಲಿ ಹಿಂದೂ ಭಯೋತ್ಪಾದನೆ ಇದೆ ಎಂಬ ಅನೇಕ ಟ್ವೀಟ್ ಗಳು ಮಾಡಲಾಗುತ್ತಿದೆ.ಇದಕ್ಕೆ ನಟಿ ಪ್ರಣಿತಾ ಸುಭಾಷ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಭಯೋತ್ಪಾದನೆ ಪದ ಬಳಸುತ್ತಿದ್ದಾರೆ.ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ. ಅವರು ನಿಮ್ಮ ಸುತ್ತಲ್ಲೂ ಇದ್ದಾರೆ ಎಂದು ಟ್ವೀಟಿಸಿದ್ದಾರೆ.ಪ್ರಣಿತಾರ ಟ್ವೀಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೀವು ನಿಜಕ್ಕೂ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.ಪ್ರಣಿತಾ ಸುಭಾಷ್ಪ್ರಣಿತಾ ಸುಭಾಷ್ಪ್ರಣಿತಾ ಸುಭಾಷ್ಪ್ರಣಿತಾ ಸುಭಾಷ್Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos