ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಸಿನಿಮಾ

ಕಿಚ್ಚ ಸುದೀಪ್ ಮಾತಿಗೆ ಮಣಿದು ಸಾವಿನ ಮಾತು ಕೈಬಿಟ್ಟಿದ್ದ ನಟಿ ಜಯಶ್ರೀ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಿಂಗಳ ಹಿಂದಷ್ಟೆ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮಕ್ಕೆ ಸೇರಿದ್ದ ಜಯಶ್ರೀ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾತ್ರಿ ಊಟ ಮುಗಿಸಿ ಜಯಶ್ರೀ ರೂಂ ಸೇರಿಕೊಂಡಿದ್ದರು. ಆದರೆ ಬೆಳಗ್ಗೆ ಎಷ್ಟು ಹೊತ್ತಾದರೂ ಹೊರಗೆ ಬಾರದೆ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ಮುರಿದು ನೋಡಿದಾಗ ನಟಿ ನೇಣು ಕುಣಿಕೆಯಲ್ಲಿ ನೇತಾಡುತ್ತಿದ್ದರು.
ನಟಿ ಮಾನಸಿಕ ಖಿನ್ನತೆ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು ಇದೇ ನಟಿ ಆತ್ಮಹತ್ಯೆ ಮಾಡಿಕೊಳ್ಳುಲು ಕಾರಣವಾಗಿರಬಹುದು ಎಂದು ಊಹಿಸಲಾಗಿದೆ.
ಅಲ್ಲದೆ ಕಳೆದ ಜುಲೈನಲ್ಲಿ ಸಾವಿನ ಬಗ್ಗೆ ಜಯಶ್ರೀ ಮಾತನಾಡಿದ್ದರು. ಈ ವೇಳೆ ಸುದೀಪ್ ನೀವು ಬಿಗ್ ಬಾಸ್ ಸ್ಪರ್ಧಿಯಾಗಿ ಮಾತ್ರ ನನಗೆ ಗೊತ್ತು. ಅದಕ್ಕಿಂತ ಹೆಚ್ಚು ನನಗೆ ಗೊತ್ತಿಲ್ಲ.
ಕಷ್ಟ, ಸಮಸ್ಯೆಗಳು ಇವೆ ಅಂತ ಆತ್ಮಹತ್ಯೆ ಮಾಡಿಕೊಳ್ಳಬಾರದು. ಎಲ್ಲರಿಗೂ ಅವರದ್ದೇ ಆದ ಸಮಸ್ಯೆಗಳಿರುತ್ತವೆ. ಹಾಗಂತ ಎಲ್ಲರೂ ಸಾವಿನ ಬಗ್ಗೆ ಯೋಚಿಸಿದರೆ ಹೇಗೆ, ಸಾವಿಗಿಂತ ಜೀವನ ದೊಡ್ಡದು ಎಂದು ಹೇಳಿದ್ದರು.
ಸುದೀಪ್ ಅವರ ಹಿತನುಡಿಗಳ ಬಳಿಕ ಜಯಶ್ರೀ ಸಾವಿನ ಮಾತು ಕೈಬಿಟ್ಟಿದ್ದರು. ಆದರೆ ಇದೀಗ ದಿಢೀರ್ ಅಂತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT