ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. 
ಸಿನಿಮಾ

ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್‍

ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ”ಹೌದು, ಟಾಲಿವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇದೆ ಎಂದಿದ್ದಾರೆ.
ಅವಕಾಶ ಕೊಡಿಸುವುದಾಗಿ ಹೇಳಿ ನಾಯಕಿಯರನ್ನು ಒಲಿಸಿಕೊಳ್ಳುವ ಸಂಸ್ಕೃತಿ ತೆಲುಗು ಇಂಡಸ್ಟ್ರಿಯಲ್ಲಿಯೂ ಇದೆ. ನಾನು ಅಂತಹ ವಿಷಯಗಳನ್ನು ನೋಡಿದ್ದೇನೆ. ಇದು ತೆಲುಗಿನಲ್ಲಿ ಮಾತ್ರವಲ್ಲ.
ಎಲ್ಲ ಇಂಡಸ್ಟ್ರಿಗಳಲ್ಲೂ ಇದೆ. ಆದರೆ, ನಾನು ಇಂಡಸ್ಟ್ರಿಗೆ ಬಂದಾಗಿನಿಂದ ತುಂಬಾ ನೇರವಾಗಿ ಮಾತನಾಡುತ್ತೇನೆ. ಹಾಗಾಗಿಯೇ ನನಗೆ ಅಂತಹ ಪರಿಸ್ಥಿತಿ ಎದುರಾಗಿಲ್ಲ.
ಟಾಲಿವುಡ್ ಇಂಡಸ್ಟ್ರಿಯಲ್ಲಿಯೂ ಮಹಿಳೆಯರು ಲೈಂಗಿಕ ಕಿರುಕುಳದಿಂದ ಹೋರಾಡುತ್ತಲೆ ಇದ್ದಾರೆ ಎಂದು ಹೇಳಿದ್ದಾರೆ. ನಾನು ಸಹ ಇದನ್ನು ಒಪ್ಪುತ್ತೇನೆ. ಆದರೆ ನಾನು ಸ್ವಲ್ಪ ಒರಟಾಗಿಯೇ ವರ್ತಿಸುತ್ತಿದ್ದರಿಂದ ಇಂಥ ವಿಚಾರ ಯಾರೂ ನನ್ನೊಂದಿಗೆ ಮಾತನಾಡಲಿಲ್ಲ ಎಂದಿದ್ದಾರೆ.
ಅನುಷ್ಕಾ ಸೂಪರ್ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಪದಾರ್ಪಣೆ ಮಾಡಿದ್ದರು. ಆ ನಂತರ ಅವರ ಖಾತೆಗೆ ವಿಕ್ರಮಾರ್ಕುಡು, ಅರುಂಧತಿ, ಮಿರ್ಚಿಯಂತಹ ಕಮರ್ಷಿಯಲ್ ಹಿಟ್ ಚಿತ್ರಗಳು ಸೇರ್ಪಡೆಯಾದವು.
ಅರುಂಧತಿ ಜೊತೆ ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸಿರುವ ಅನುಷ್ಕಾ ನಂತರ ಝೀರೋ ಸೈಜ್ ಮತ್ತು ಭಾಗಮತಿ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾಗಮತಿ ಚಿತ್ರದ ನಂತರ ಸ್ವೀಟಿ ಯಾವುದೇ ಚಿತ್ರಕ್ಕೆ ಕಮಿಟ್ ಆಗಿಲ್ಲ.
ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT