ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ ಈ ಗಜರಾಮ ಚಿತ್ರವನ್ನು ನಿರ್ದೇಶಿಸುತ್ತಿದ್ದು, ತಪಸ್ವಿನಿ ಈಗಾಗಲೇ ಕಥೆ ಕೇಳಿ ಓಕೆ ಮಾಡಿದ್ದಾರೆ.ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ನಾಯಕಿಯಾಗಿ ಗಮನ ಸೆಳೆದಿದ್ದ ತಪಸ್ವಿನಿ ಪೂಣಚ್ಚ ಈಗ ‘ಗಜರಾಮ’ನ ಜೋಡಿಯಾಗಿದ್ದಾರೆ.ತಪಸ್ವಿನಿ ಪೂಣಚ್ಚನಾಯಕಿಯಾಗಿ ತಪಸ್ವಿನಿಗಿದು ಎರಡನೇ ಸಿನಿಮಾ.ಈ ಕುರಿತು ಮಾತನಾಡಿರುವ ತಪಸ್ವಿನಿ, 'ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ನಾನು ಸೆಲೆಕ್ಟ್ ಆಗಿದ್ದೇ ಆಕಸ್ಮಿಕವಾಗಿ.ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅನ್ನೋದು ನನ್ನ ಉದ್ದೇಶ ಆಗಿರಲಿಲ್ಲ.ಆದರೆ ಇನ್ ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ನೋಡಿ ಚಿತ್ರತಂಡ ನನ್ನ ಸಂಪರ್ಕ ಮಾಡಿದರು.ಕಥೆ ಕೇಳಿ ಇಷ್ಟ ಆಯ್ತು, ಒಪ್ಪಿಕೊಂಡೆ. ಇದೀಗ ‘ಗಜರಾಮ’ ಸಿನಿಮಾ ಅವಕಾಶ ಸಿಕ್ಕಿದೆ.ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಂತರ ಸಾಕಷ್ಟು ಸಿನಿಮಾ ಆಫರ್ ಬರ್ತಿದೆ. ಆದರೆ ಗಜರಾಮ ಸಿನಿಮಾ ಪಾತ್ರ ಇಷ್ಟ ಆಯ್ತು.ಹಳ್ಳಿ ಹುಡುಗಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.ಇದೇ ತಿಂಗಳಾಂತ್ಯಕ್ಕೆ ಗಜರಾಮ ಸಿನಿಮಾ ಸೆಟ್ಟೇರಲಿದೆ.ಶಿಷ್ಯ ದೀಪಕ್, ಶರತ್ ಲೋಹಿತಾಶ್ವ ಮತ್ತು ಶೋಭ್ ರಾಜ್ ಪ್ರಮುಖ ಈ ಚಿತ್ರದ ವಿಶೇಷ ಪಾತ್ರಗಳಲ್ಲಿದ್ದಾರೆ.ತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚತಪಸ್ವಿನಿ ಪೂಣಚ್ಚ