ಡಿಸೆಂಬರ್ 14 ರ ಗುರುವಾರ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಮತ್ತು ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ತೆರಳಿ ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇವೆ ಸಲ್ಲಿಸಿದರು. 
ಸಿನಿಮಾ

'ಡಂಕಿ' ಚಿತ್ರ ಬಿಡುಗಡೆಗೆ ಸಜ್ಜು: ಶಿರಡಿ ಸಾಯಿಬಾಬಾ ಮುಂದೆ ಶಾರೂಕ್ ಖಾನ್ ಪ್ರಾರ್ಥನೆ

ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಮತ್ತು ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ತೆರಳಿ ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕ್ರಿಸ್ ಮಸ್ ಹಬ್ಬಕ್ಕೆ ಶಾರೂಕ್ ಖಾನ್ ಅಭಿನಯದ ಡಂಕಿ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರು ಸಾಯಿಬಾಬಾನ ಆಶೀರ್ವಾದ ಪಡೆಯಲು ಬಂದಿದ್ದಾರೆ. ಡಿಸೆಂಬರ್ 21 ರಂದು ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರ ಆಕ್ಷನ್-ಪ್ಯಾಕ್ಡ್ ಸಲಾರ್ ಚಿತ್ರ ಬಿಡುಗಡೆಯಾಗುವ ಸಂದರ್ಭದಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.
ಶಾರೂಕ್ ಪುತ್ರಿ ಸುಹಾನಾ ಅವರ ವೃತ್ತಿಜೀವನವು ಜೋಯಾ ಅಖ್ತರ್ ಅವರ ಚಲನಚಿತ್ರ ದಿ ಆರ್ಚೀಸ್‌ನಲ್ಲಿ ವೆರೋನಿಕಾ ಪಾತ್ರ ಮೂಲಕ ಪ್ರಾರಂಭವಾಗಿದೆ.
ಕಳೆದ ಮಂಗಳವಾರ ಶಾರುಖ್ ಖಾನ್ ಜಮ್ಮುವಿನ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವರ್ಷ ನಟ ತಮ್ಮ ಬ್ಲಾಕ್‌ಬಸ್ಟರ್ ಚಿತ್ರಗಳಾದ ಪಠಾನ್ ಮತ್ತು ಜವಾನ್ ಬಿಡುಗಡೆಗೂ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿದ್ದರು.
ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಡಂಕಿ ಚಿತ್ರದಲ್ಲಿ ಬೊಮನ್ ಇರಾನಿ, ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಮತ್ತು ಅನಿಲ್ ಗ್ರೋವರ್ ಅವರಂತಹ ಖ್ಯಾತ ಕಲಾವಿದರು ಇದ್ದಾರೆ.
ಅಭಿಜತ್ ಜೋಶಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಬರೆದಿರುವ ಡಂಕಿ ಚಿತ್ರ ನಾಲ್ಕು ಸ್ನೇಹಿತರ ಮತ್ತು ಲಂಡನ್ ತಲುಪುವ ಅವರ ಅನ್ವೇಷಣೆಯ ಹೃದಯಸ್ಪರ್ಶಿ ಕಥೆಯಾಗಿದೆ.
ಹಾಗಾದರೆ 2023 ವರ್ಷದ ಕೊನೆ ಶಾರೂಕ್ ಗೆ ಸಿಹಿಯಾಗಲಿದೆಯೇ, ಕಹಿಯಾಗಲಿದೆಯೇ ಎಂದು ನೋಡಬೇಕು.
ಶಾರೂಕ್ ಖಾನ್ ಗೆ ಸಾಯಿಬಾಬಾನ ಫೋಟೋ ಮತ್ತು ಪುಸ್ತಕ ಉಡುಗೊರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT