2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ… 
ಸಿನಿಮಾ

ಹಿನ್ನೋಟ 2023: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು

2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ…

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅವರ ಮದುವೆ ಅವಿವಾ ಬಿದಪ್ಪ ಜೊತೆ ನಡೆಯಿತು. ಅಭಿಷೇಕ್ - ಅವಿವಾ ವಿವಾಹಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು, ಅಪಾರ ಅಭಿಮಾನಿಗಳು ಸಾಕ್ಷಿಯಾಗಿದ್ದರು.
ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಈ ವರ್ಷ ವಿವಾಹ ಬಂಧನಕ್ಕೆ ಒಳಗಾದರು. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ - ವಸಿಷ್ಠ ಸಿಂಹ ವಿವಾಹ ಮಹೋತ್ಸವ ಜರುಗಿತು.
ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಅವರು ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಕೊಡವ ಸಂಪ್ರದಾಯದಂತೆಯೇ ಮದುವೆಯ ಎಲ್ಲ ಶಾಸ್ತ್ರಗಳು ನಡೆದವು.
ಕನ್ನಡ ಚಿತ್ರಗಳಲ್ಲೂ ಮಿಂಚಿರುವ ಪರಭಾಷಾ ನಟ ಕಬೀರ್ ದುಹಾನ್ ಸಿಂಗ್ ತಮ್ಮ ಬಹುಕಾಲದ ಗೆಳತಿ ಸೀಮಾ ಚಾಹಲ್ ಅವರನ್ನ ಮದುವೆಯಾದರು. ಫರೀದಾಬಾದ್‌ನ ಹೋಟೆಲ್‌ನಲ್ಲಿ ಕಬೀರ್ ದುಹಾನ್ ಸಿಂಗ್ - ಸೀಮಾ ಚಾಹಲ್ ವಿವಾಹ ಜರುಗಿತು.
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಧಿಕೃತ
ಈ ವರ್ಷ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ - ಎಎಪಿ ಮುಖಂಡ ರಾಘವ್ ಚಡ್ಡಾ ವಿವಾಹ ಮಹೋತ್ಸವ ಗ್ರ್ಯಾಂಡ್ ಆಗಿ ನಡೆಯಿತು. ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಚೋಪ್ರಾ - ರಾಘವ್ ಚಡ್ಡಾ ವಿವಾಹ ಬಂಧನಕ್ಕೆ ಒಳಗಾದರು.
ಮುಂಗಾರು ಮಳೆ ಸಿನಿಮಾ ಖ್ಯಾತಿಯ ಪೂಜಾ ಗಾಂಧಿ ವೈವಾಹಿಕ ಬದುಕಿಗೆ ನಾಂದಿ ಹಾಡಿದರು. ಉದ್ಯಮಿ ವಿಜಯ್‌ ಘೋರ್ಪಡೆ ಅವರನ್ನ ಪೂಜಾ ಗಾಂಧಿ ಮದುವೆಯಾದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯ ಅನುಸಾರ, ಪೂಜಾ ಗಾಂಧಿ - ವಿಜಯ್ ಘೋರ್ಪಡೆ ವಿವಾಹ ಸರಳವಾಗಿ ನಡೆಯಿತು.
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ಗೆ 'ವಜ್ರಕಾಯ' ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ಅವರು ಇದೇ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?